26.1 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ರೋಟರಿ ಕ್ಲಬ್ ಹಾಗೂ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ರೋಟರಿ ಕ್ಲಬ್ ಹಾಗೂ ಇಂಟರಾಕ್ಟ್ ಕ್ಲಬ್‌ನ 2026–27ನೇ ಸಾಲಿನ ಪದಗ್ರಹಣ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್‌ನ ನೂತನ ಪದಾಧಿಕಾರಿಗಳಾಗಿ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಅಧ್ಯಕ್ಷರಾಗಿ, ವಿದ್ಯಾರ್ಥಿನಿ ಪೃಥ್ವಿ ಪಿ.ಎಂ. ಕಾರ್ಯದರ್ಶಿಯಾಗಿ ಹಾಗೂ ವಿದ್ಯಾರ್ಥಿನಿ ಧನ್ವಿ ಖಜಾಂಚಿಯಾಗಿ ಅಧಿಕಾರ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಇಂಟರಾಕ್ಟ್ ಕ್ಲಬ್‌ನ ನೂತನ ಅಧ್ಯಕ್ಷರು ಹಾಗೂ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಅಧಿಕಾರ ಹಸ್ತಾಂತರಿಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಟರಿಯನ್ ಡಾ. ಜಯಕುಮಾರ್ ಶೆಟ್ಟಿ ಅವರು ನಾಯಕತ್ವದ ಗುಣಗಳು, ಸೇವಾ ಮನೋಭಾವ ಹಾಗೂ ವಿದ್ಯಾರ್ಥಿಗಳ ಸಾಮಾಜಿಕ ಜವಾಬ್ದಾರಿಗಳ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು. ರೋಟರಿಯನ್ ಪ್ರವೀಣ್ ಗೋರೆ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ರೋಟರಿಯನ್ ರಶ್ಮಿ ಕಾರಂತ್ ಅವರು ಜೀವನ ಕೌಶಲ್ಯ, ಆತ್ಮವಿಶ್ವಾಸ ಹಾಗೂ ವ್ಯಕ್ತಿತ್ವ ವಿಕಸನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ 2025–26ನೇ ಸಾಲಿನ ಇಂಟರಾಕ್ಟ್ ಕ್ಲಬ್‌ನ ಅಧ್ಯಕ್ಷೆಯಾಗಿದ್ದ ವಿದ್ಯಾರ್ಥಿನಿ ಸಹಿತ ಕಳೆದ ಸಾಲಿನ ವಿವಿಧ ಸೇವಾ ಚಟುವಟಿಕೆಗಳ ವರದಿಯನ್ನು ಮಂಡಿಸಿದರು. ಬಳಿಕ ನೂತನ ಅಧ್ಯಕ್ಷರು 2026–27ನೇ ಸಾಲಿನ ಕಾರ್ಯಯೋಜನೆ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ವಿವರಿಸಿದರು.

ಈ ಸಂದರ್ಭದಲ್ಲಿ 7, 8 ಹಾಗೂ 9ನೇ ತರಗತಿಗಳಲ್ಲಿ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ರೋಟರಿಯನ್‌ಗಳು ಗೌರವಿಸಿ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ., ಶಿಕ್ಷಕ ವೃಂದ, ರೋಟರಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

Suddi Udaya

ಬೆಳ್ತಂಗಡಿ ಜೆಕಾಂ ನೂತನ‌ ಅಧ್ಯಕ್ಷರಾಗಿ ಉದ್ಯಮಿ ವಿಶಾಲ್ ಅಗಷ್ಟೀನ್ ಆಯ್ಕೆ

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಎಸ್.ಡಿ.ಎಂ ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಹೊಸ ಮೈಲಿಗಲ್ಲು

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ಪಂಚಾಯತ್ ಸಿಬ್ಬಂದಿಗಳಿಂದ ಸದಸ್ಯರಿಗೆ ವಿದಾಯ ಸಮಾರಂಭ

Suddi Udaya
error: Content is protected !!