September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ ಹಾಗೂ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿ

ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಜುಲೈ ತಿಂಗಳ ಸಾಮಾನ್ಯ ಸಭೆ ಹಾಗೂ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿಯು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ಕಚೇರಿಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ವಹಿಸಿದರು. ಘಟಕದ ಕಾರ್ಯ ವೈಖರಿಯನ್ನು ವಲಯ ಉಪಾಧ್ಯಕ್ಷ ಕಾಶೀನಾಥ್ ಗೋಗಟೆ ಅವರು ಶ್ಲಾಘಿಸುತ್ತಾ ಮುಂದಿನ ವಲಯ ಹಾಗೂ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಘಟಕದ ವತಿಯಿಂದ ಫಲ್ಗುಣಿ ಪ್ರಾಂತ್ಯದ ವಲಯ ಉಪಾಧ್ಯಕ್ಷರನ್ನು ಸನ್ಮಾನಿಸಲಾಯಿತು. ಆಯುಷ್ ಜೈನ್ ಅವರು ಅತಿಥಿಗಳನ್ನು ಆಹ್ವಾನಿಸಿ ಸಭೆಗೆ ವಲಯ ಉಪಾಧ್ಯಕ್ಷರನ್ನು ಪರಿಚಯಿಸಿದರು. ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ದಕ್ಷ ಜೈನ್ ವಾಚಿಸಿದರು.

ಈ ಸಂದರ್ಭದಲ್ಲಿ ಜುಲೈ ತಿಂಗಳಲ್ಲಿ ಹುಟ್ಟುಹಬ್ಬವನ್ನು ಆಚರಿಸಿದ ಯೋಗೀಶ್ ಎಸ್., ರೇಷ್ಮಾ ಡಿ ಅಲ್ಮೇಡಾ ಮತ್ತು ಅಕ್ಷತ್ ರೈ ಅವರಿಗೆ ಶುಭಾಶಯವನ್ನು ಸಲ್ಲಿಸಲಾಯಿತು. ಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಡಾ. ಶೋಭಾ ಪಿ‌., ಕೆ. ಶ್ರೀಧರ ರಾವ್, ಸಂತೋಷ್ ಜೈನ್, ಜೋಸೆಫ್ ಪಿರೇರಾ, ಜೆಸಿಂತಾ ಡಿಸೋಜ, ನಿತ್ಯಾನಂದ ರೈ ಹಾಗೂ ವಲಯ ಉಪಾಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ ಭಾಗವಹಿಸಿದರು. ಕಾರ್ಯದರ್ಶಿಗಳಾದ ಜೋಯಲ್ ಪಿರೇರಾ ವಂದಿಸಿದರು.

Related posts

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

572 ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ: ವಿದ್ಯಾಮಾತಾ ಅಕಾಡೆಮಿಯಿಂದ ತರಬೇತಿ ಪ್ರಾರಂಭ: ಪಿಯುಸಿ ಮುಗಿಸಿರುವಂತಹ ಅಭ್ಯರ್ಥಿಗಳಿಗೆ ಅತ್ಯುತ್ತಮ ಅವಕಾಶ

Suddi Udaya

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya
error: Content is protected !!