26.1 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್ ನ ಸಹಯೋಗದೊಂದಿಗೆ ಸರಕಾರಿ ಪ್ರೌಢ ಶಾಲೆ ಬದನಾಜೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು,

ಜ್ಯೋತಿ ಪ್ರಜ್ವಲನ ಮಾಡಿ ಕಾರ್ಯ ಕ್ರಮ ವನ್ನುಉದ್ಘಾಟಿಸಿ ದ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ರೋ ಶ್ರೀಧರ್ ಕೆ. ವಿ, ಇವರು ,ವಿಧ್ಯಾರ್ಥಿಗಳು ದುಶ್ಚಟದಿಂದ ದೂರ ಇದ್ದು,ಕಲಿಕೆಯ ಕಡೆಗೆ ಗಮನ ಹರಿಸಬೇಕು, ವಿಧ್ಯಾರ್ಥಿ ಜೀವನ ಅಮೂಲ್ಯವಾದುದು, ಈ ಸಂದರ್ಭದಲ್ಲಿ ದೂರ ದೃಷ್ಟಿಯ ಗುರಿಯನ್ನು ಇಟ್ಟುಕೊಂಡು , ಶ್ರದ್ಧೆ, ಮತ್ತು ಏಕಾಗ್ರತೆಯಿಂದ, ನಿರಂತರ ಅಧ್ಯಯನ ಶೀಲರಾಗಬೇಕು, ಈ ಶಾಲೆಯಲ್ಲಿ ಶಿಕ್ಷಣದ ಜೊತೆಗೆ ನಿಮ್ಮ ವ್ಯಕ್ತಿತ್ವ ವಿಕಸನಕ್ಕೆ ಬೇಕಾದ ಅನೇಕ ಅವಕಾಶಗಳು ಇವೆ, ಆ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು, ಜೀವನದಲ್ಲಿ ಸಾಧನೆ ಮಾಡಿ, ಶಾಲೆಗೂ, ಹೆತ್ತವರಿಗೂ ಕೀರ್ತಿ ತನ್ನಿ ಎಂದು ಶುಭ ಹಾರೈಸಿದರು,

ಸಂಪನ್ಮೂಲ ವ್ಯಕ್ತಿ ರೋ, ಬಿ. ಸೋಮಶೇಖರ ಶೆಟ್ಟಿಯವರು,ದುಶ್ಚಟಗಳ ವಿರುದ್ಧ ಜಾಗೃತಿ, ಸದಾಚಾರಗಳ ಬಗ್ಗೆ ಅರಿವು ಮೂಡಿಸುತ್ತಾ,ಮಾದಕ ದ್ರವ್ಯಗಳ ಸೇವನೆಯ ದುಷ್ಪರಿಣಾಮ, ಆದರ್ಶ ವಿದ್ಯಾರ್ಥಿಗಳಲ್ಲಿ ಇರಬೇಕಾದ ಗುಣ ನಡತೆಗಳು, ಮಾನವೀಯ ಮೌಲ್ಯ, ಭಾರತೀಯ ಪರಂಪರೆಯ ಬಗ್ಗೆ, ಮತ್ತು ಜೀವನ ಮೌಲ್ಯ ಗಳಿಗೆ ಸಂಬಂಧಿಸಿದ ಅನೇಕ ಕತೆಗಳ ಮೂಲಕ, ವಿವರಿಸಿ, ಆದರ್ಶ ವಿದ್ಯಾರ್ಥಿಯಾಗಿ, ದೇಶದ ಸತ್ಪ್ರಜೆಯಾಗಿ ಬಾಳುವಂತೆ ಮಾರ್ಗದರ್ಶನ ನೀಡಿದರು.

ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಮುನಾ ಮಾತನಾಡಿ ರೋಟರಿ ಸಂಸ್ಥೆಯ ವತಿಯಿಂದ ಜರುಗಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯ ಕ್ರಮ, ವಿಧ್ಯಾರ್ಥಿಗಳಿಗೆ ಅವಶ್ಯಕವಾಗಿದ್ದು,ವಿಧ್ಯಾರ್ಥಿಗಳಿಗೆ ಉತ್ತಮ ಮಾರ್ಗ ದರ್ಶನ ನೀಡಿದ ಬಗ್ಗೆ ರೋಟರಿ ಸಂಸ್ಥೆಯನ್ನು ಅಭಿನಂದಿಸಿದರು ಹಾಗೂ ವಿಧ್ಯಾರ್ಥಿಗಳು ಆರೋಗ್ಯ ಪೂರ್ಣ ವ್ಯಕ್ತಿತ್ವ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ಕುಮಾರಿ ವರ್ಷಿತಾ ನಿರೂಪಿಸಿದ ಕಾರ್ಯ ಕ್ರಮದಲ್ಲಿ ಕ್ಲಬ್ ನ ಅಧ್ಯಕ್ಷ ದಯಾಕರ ಸ್ವಾಗತಿಸಿ, ಕಾರ್ಯದರ್ಶಿ ವಂಶಿ ವಂದಿಸಿದರು, ರೋ. ವಿದ್ಯಾಕುಮಾರ್ ಕಾಂಚೋಡು, ಮತ್ತು ಶಾಲೆಯ ಸಹ ಶಿಕ್ಷಕರು ಉಪಸ್ಥಿತರಿದ್ದರು.

Related posts

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

Suddi Udaya

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya

ಶ್ರೀ ಶಾರದಾಂಭ ಭಜನಾ ಮಂಡಳಿಯಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಪಡೆದ ಸಂಜನಾ ಪೈ ಗೆ ಸನ್ಮಾನ

Suddi Udaya

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

Suddi Udaya
error: Content is protected !!