ಬೆಳ್ತಂಗಡಿ:ತಾಲೂಕಿನ ಗುರುವಾಯನಕೆರೆ ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.31 ರಂದು ನಡೆದಿದೆ.
ವಿದ್ಯಾರ್ಥಿ ಹೊಟ್ಟೆ ನೋವು ಮತ್ತು ವಾಂತಿ ಆಗುತ್ತಿರುವುದಾಗಿ ವಾರ್ಡ್ ನ್ ಗೆ ತಿಳಿಸಿ ವಿಶ್ರಾಂತಿಗೆ ತೆರಳಿದ್ದ,ಬಳಿಕ ಮಧ್ಯಾಹ್ನ ವಾರ್ಡನ್ ಕೊಠಡಿಗೆ ತೆರಳಿ ನೋಡಿದಾಗ ವಿದ್ಯಾರ್ಥಿ ಅಲ್ಲಿ ಇರಲಿಲ್ಲ. ನಂತರ ಆತನ ಕೊಠಡಿಗೆ ತೆರಳಿದಾಗ ಬಾಗಿಲು ಮುಚ್ಚಿತ್ತು, ಬಲವಂತವಾಗಿ ಬಾಗಿಲು ತೆರೆದು ನೋಡಿದಾಗ ವಿದ್ಯಾರ್ಥಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













