25.2 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿಗೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಭೇಟಿ

ಬೆಳ್ತಂಗಡಿ: ತಾಲೂಕಿನದ್ಯಾಂತ ಮಳೆ ಆರ್ಭಟ ಮುಂದುವರಿದಿದ್ದು ಆ. 1 ರಂದು ಸುರಿದ ಕುಂಭದ್ರೋಣ ಮಳೆಗೆ ತಾಲೂಕಿನ ನಾನಾ ಕಡೆಗಳಲ್ಲಿ ಸಂಪರ್ಕ ಕಡಿತ, ಗುಡ್ಡ ಜರಿತ, ತೋಟ, ಮನೆಗಳು ಜಲಾವೃತಗೊಂಡು ಹಾನಿಯಾದ ಹಿನ್ನಲೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಆ.3 ರಂದು ಬೆಳ್ತಂಗಡಿ ತಾಲೂಕಿನ ಲಾಯಿಲ ಮತ್ತು ಮುಂಡಾಜೆ ಗ್ರಾಮಗಳಿಗೆ ಭೇಟಿ ನೀಡಿದರು.

ಲಾಯಿಲ ಗ್ರಾಮದ ಪುತ್ರಬೈಲು ಹಾಗೂ ಗುರಿಂಗಾನ ಪರಿಸರದಲ್ಲಿ 17 ಮನೆಗಳಿಗೆ ನದಿ ನೀರುನುಗ್ಗಿತ್ತು, ಕಿಲ್ಲೂರು ರಸ್ತೆ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿತ್ತು. ಈ ಹಿನ್ನಲೆ ಸದ್ರಿ ಸ್ಥಳಕ್ಕೆ ಭೇಟಿ ನೀಡಿದ ಅವರು ಕಿಂಡಿ ಅಣೆಕಟ್ಟನ್ನು ಪರಿಶೀಲನೆ ನಡೆಸಿ ಅಧಿಕಾರಗಳೊಂದಿಗೆ ಮಾಹಿತಿ ಪಡೆದರು.

ದೇಶದಲ್ಲಿ ಅತೀ ಹೆಚ್ಚು ಮಳೆಯಾದ ಎರಡನೇ ಸ್ಥಳ ಮುಂಡಾಜೆ ಗ್ರಾಮಕ್ಕೆ ಭೇಟಿ ನೀಡಿ ಮಳೆಯಿಂದ ಹಾನಿಗೀಡಾದ ಪ್ರದೇಶವನ್ನು ಪರಿಶೀಲನೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜೊತೆಯಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಎಸ್.ಎನ್.ನರಗುಂದ, ಬೆಳ್ತಂಗಡಿ ತಾಲೂಕು ಪಂಚಾಯತ್ ಇಒ ಭವಾನಿಶಂಕರ್, ಬೆಳ್ತಂಗಡಿ ಕಂದಾಯ ನಿರೀಕ್ಷಕ ರಾಜು ಲಮಾಣಿ, ಲಾಯಿಲ ಪಿಡಿಒ ತಾರಾನಾಥ್ ನಾಯ್ಕ್, ಲಾಯಿಲ ಗ್ರಾಮ ಆಡಳಿತಾಧಿಕಾರಿ ರನಿತಾ, ಮುಂಡಾಜೆ ಪಿಡಿಒ ಗಾಯತ್ರಿ, ಇಂಜಿನಿಯರ್ ಸಂದೀಪ್, ಪಿ.ಆರ್.ಡಿ.ಇ. ನ ಎಇಇ ಜನಾರ್ಧನ್ ಹಾಗೂ ಮತ್ತಿತರ ಅಧಿಕಾರಿಗಳು ಭಾಗಿಯಾಗಿದ್ದರು.

Related posts

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಬೆಳ್ತಂಗಡಿ ಮಹಾಸಭೆ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ಗೃಹಜ್ಯೋತಿ ಮರುಪರಿಶೀಲನಾ ಶಿಬಿರಕ್ಕೆ ಚಾಲನೆ: ರಾಜಕೀಯ‌ ಬೇಡ ಯೋಜನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಮಾಡಿ: ಕೆಡಿಪಿ ಸದಸ್ಯ ಸಂತೋಷ್ ಕುಮಾರ್

Suddi Udaya

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya
error: Content is protected !!