26.1 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರಿಗೆ ಆದಿದ್ರಾವಿಡ ಸಮಾಜ ಸೇವಾ ಸಂಘದಿಂದ ಗೌರವ-ಸನ್ಮಾನ

ಬೆಳ್ತಂಗಡಿ: ಕರ್ನಾಟಕ ಟಿವಿ ಲೀಡರ್ ಅವಾರ್ಡ್ 2025 ‘ಉತ್ತಮ ಶಾಸಕ’ಪ್ರಶಸ್ತಿಗೆ ಭಾಜನರಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರನ್ನು ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಆ.2ರಂದು ಅವರ ನಿವಾಸದಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಮುದಾಯದಲ್ಲಿರುವ ವಿವಿಧ ಸಮಸ್ಯೆ ಹಾಗೂ ಅದರ ಪರಿಹಾರದ ಕುರಿತು ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಕೊಕ್ಕಡ ಹಾಗೂ ತಾಲೂಕು ಘಟಕದ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಕುಕ್ಕಳ ಚರ್ಚಿಸಿದರು. ಇದೇ ವೇಳೆ ಧರ್ಮಸ್ಥಳ ವಲಯ ಘಟಕದ ವತಿಯಿಂದ ಧರ್ಮಸ್ಥಳದಲ್ಲಿ ಸಮುದಾಯ ಭವನಕ್ಕೆ ಜಮೀನು, ಪ್ರತ್ಯೇಕ ರುದ್ರಭೂಮಿ ಹಾಗೂ ಬಡ ಕುಟುಂಬಗಳಿಗೆ ವಸತಿ ಹಾಗೂ ಕೃಷಿ ಚಟುವಟಿಕೆಗಳಿಗೆ ಜಮೀನು ಒದಗಿಸಿಕೊಡುವಂತೆ ಶಾಸಕರಿಗೆ ವಿಶೇಷ ಮನವಿಯನ್ನು ಸಲ್ಲಿಸಲಾಯಿತು. ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸುವ ಭರವಸೆಯನ್ನು ನೀಡಿದರು.

ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಕೊಕ್ಕಡ, ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಕುಕ್ಕಳ, ಸಂಘಟನೆಯ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಲಕ್ಷö್ಮಣ್ ಜಿ.ಎಸ್., ರಾಘವ ಕಲ್ಮಂಜ, ರಾಮು ಪಡಂಗಡಿ, ಕು. ಗೌರಿ ತಾಲೂಕು ಘಟಕದ ಸದಸ್ಯರು, ಧರ್ಮಸ್ಥಳ ವಲಯ ಘಟಕದ ಅಧ್ಯಕ್ಷರಾದ ಗಣೇಶ್ ಡಿ., ಉಪಾಧ್ಯಕ್ಷೆ ಶ್ರೀಮತಿ ಸುಜಾತ, ಸದಸ್ಯರಾದ ಶ್ರೀಮತಿ ಸುನೀತಾ, ಕು. ಜ್ಯೋತಿ, ಶ್ರೀಮತಿ ಆಶಾ, ಕು. ವನಿತಾ ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

Suddi Udaya

ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya
error: Content is protected !!