28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾವಳಿಯ ಕೋಳಿ ರೈತರ ಹಿತರಕ್ಷಣೆಗಾಗಿ ದನಿಯಾದ ‘ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ: ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆ

ಬೆಳ್ತಂಗಡಿ: ಬೆಂಗಳೂರು ಪಶುಭವನದಲ್ಲಿ ಕರ್ನಾಟಕ ಕೋಳಿ ಸಾಕಾಣಿಕೆ ರೈತರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಹಾಗೂ ಕುಕ್ಕುಟ ಮಂಡಳಿ ಅಧ್ಯಕ್ಷ ವಿಜಯ್ ಅವರ ಅಧ್ಯಕ್ಷತೆಯಲ್ಲಿ ಆ.03 ರಂದು ಜರುಗಿದ ಮುಖ್ಯಮಂತ್ರಿಗಳ ಭೇಟಿಯ ಪೂರ್ವಭಾವಿ ಸಭೆಯಲ್ಲಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಪ್ರತಿನಿಧಿಸಿದ ‘ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ (ರಿ.)’ ಮುಂಚೂಣಿಯಲ್ಲಿ ನಿಂತು ಕರಾವಳಿ ಭಾಗದ ರೈತರ ಪರವಾಗಿ ಗಟ್ಟಿಯಾದ ಧ್ವನಿ ಮೊಳಗಿಸಿತು.

ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸಲಿರುವ ಅಧಿಕೃತ ಮನವಿ ಪತ್ರದ ರೂಪುರೇಷೆ ರೂಪಿಸುವಲ್ಲಿ ಸಕ್ರಿಯ ಪಾತ್ರ ವಹಿಸಿದ ಒಕ್ಕೂಟದ ಅಧ್ಯಕ್ಷ ಸಯ್ಯದ್ ಹಸನ್, ಪ್ರಧಾನ ಕಾರ್ಯದರ್ಶಿ ಅಶ್ವಿನ್ ಕುಮಾರ್ ಬಿ.ಕೆ., ಸಂಘಟನಾ ಕಾರ್ಯದರ್ಶಿ ರಿತೇಶ್ ಕೊಕ್ಕಡ ಹಾಗೂ ಸದಸ್ಯ ಲಕ್ಷ್ಮಣ್ ಗೌಡ ಚಿಬಿದ್ರೆ ಅವರು ರೈತರ ಪ್ರಮುಖ ಬೇಡಿಕೆಗಳನ್ನು ಬಲವಾಗಿ ಮಂಡಿಸಿ ಗಮನ ಸೆಳೆದರು.

ಸಭೆಯಲ್ಲಿ ಕೋಳಿ ಸಾಕಾಣಿಕೆ ರೈತರಿಗೆ ಕನಿಷ್ಠ 10 ರೂಪಾಯಿಗಳ ಜಿಸಿ ದರ ಕಡ್ಡಾಯ ನಿಗದಿಪಡಿಸುವುದು, ಪ್ರಕೃತಿ ವಿಕೋಪದಿಂದ ಹಾನಿಗೊಳಗಾಗುವ ಕೋಳಿ ಕೇಂದ್ರಗಳಿಗೆ ಸೂಕ್ತ ಪರಿಹಾರ ನೀಡುವುದು ಹಾಗೂ ಕರಾವಳಿಯಲ್ಲಿ ತೀವ್ರವಾಗಿ ಕಾಡುತ್ತಿರುವ ‘ನೊಣದ ಸಮಸ್ಯೆ’ಯನ್ನು ವೈಜ್ಞಾನಿಕವಾಗಿ ನಿಯಂತ್ರಿಸಲು ಶಾಶ್ವತ ಕ್ರಮಕೈಗೊಳ್ಳುವಂತೆ ಒತ್ತಾಯಿಸಲಾಯಿತು. ರಾಜ್ಯ ಮಟ್ಟದ ಈ ಸಭೆಯಲ್ಲಿ ಕರಾವಳಿಯ ಕೋಳಿ ರೈತರ ಸಂಕಷ್ಟಗಳಿಗೆ ಧ್ವನಿಯಾಗುವ ಮೂಲಕ ಒಕ್ಕೂಟವು ಅತ್ಯಂತ ಮಹತ್ವದ ಮತ್ತು ಶ್ಲಾಘನೀಯ ಪಾತ್ರವನ್ನು ನಿರ್ವಹಿಸಿದೆ.

Related posts

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದೇಶಭಕ್ತಿ ಗೀತ ಗಾಯನ ಹಾಗೂ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಜನಪದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ

Suddi Udaya

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ರಿದಮಿಕ್ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!