28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ನಿಡ್ಲೆ–ಕಾಟ್ಲಾದಲ್ಲಿ ಏರ್‌ಟೆಲ್ ಟವರ್ ಸಮಸ್ಯೆ: 2–3 ವರ್ಷಗಳಿಂದ ಸಂಕಷ್ಟದಲ್ಲಿರುವ ಗ್ರಾಮಸ್ಥರು

ಬೆಳ್ತಂಗಡಿ : ನಿಡ್ಲೆ–ಕಾಟ್ಲಾ ಪ್ರದೇಶದಲ್ಲಿರುವ ಏರ್‌ಟೆಲ್ ಮೊಬೈಲ್ ಟವರ್ ಕಳೆದ 2–3 ವರ್ಷಗಳಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರ ಪರಿಣಾಮವಾಗಿ ಕರೆ (Call) ಸೇವೆ ಪದೇಪದೇ ಕಡಿತಗೊಳ್ಳುತ್ತಿದ್ದು, ಇಂಟರ್ನೆಟ್ ಡೇಟಾ ಸೇವೆ ಹೆಸರಿಗೆ ಮಾತ್ರ ಉಳಿದಿದೆ.

ವಿಶೇಷವಾಗಿ ಪುದುವೆಟ್ಟು ಗ್ರಾಮದ ಮೇಲಿನಡ್ಕ, ಸುರಳ್ಳಿ ಹಾಗೂ ಮಡ್ಯಾ ಭಾಗಗಳಲ್ಲಿ ಏರ್‌ಟೆಲ್ ನೆಟ್‌ವರ್ಕ್ ಮತ್ತು ಇಂಟರ್ನೆಟ್ ಸೇವೆ ಬಹುತೇಕ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ವಿದ್ಯಾರ್ಥಿಗಳ ಆನ್‌ಲೈನ್ ಶಿಕ್ಷಣ, ರೈತರ ಮಾಹಿತಿ ವಿನಿಮಯ, ಡಿಜಿಟಲ್ ಬ್ಯಾಂಕಿಂಗ್, ಯುಪಿಐ ಪಾವತಿಗಳು, ವ್ಯಾಪಾರ–ವಹಿವಾಟು ಹಾಗೂ ತುರ್ತು ಸಂದರ್ಭಗಳಲ್ಲಿ ಸಂಪರ್ಕ ಸಾಧಿಸುವುದಕ್ಕೂ ತೀವ್ರ ತೊಂದರೆ ಉಂಟಾಗಿದೆ.

ಈ ಕುರಿತು ಏರ್‌ಟೆಲ್ ಗ್ರಾಹಕ ಸೇವೆಗೆ ಸಾರ್ವಜನಿಕರು ಹಲವು ಬಾರಿ ದೂರು ಸಲ್ಲಿಸಿದ್ದರೂ, ಕಳೆದ 2–3 ವರ್ಷಗಳಿಂದ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಟವರ್‌ನ ತಾಂತ್ರಿಕ ದೋಷವನ್ನು ಪರಿಶೀಲಿಸಿ, ಶಾಶ್ವತವಾಗಿ ಸಮಸ್ಯೆ ಪರಿಹರಿಸಿ, ಗುಣಮಟ್ಟದ ಮೊಬೈಲ್ ನೆಟ್‌ವರ್ಕ್ ಮತ್ತು ಇಂಟರ್ನೆಟ್ ಸೇವೆಯನ್ನು ಒದಗಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಸಮಸ್ಯೆ ಮುಂದುವರಿದರೆ ಉನ್ನತ ಅಧಿಕಾರಿಗಳಿಗೆ ಹಾಗೂ ಸಂಬಂಧಿತ ಇಲಾಖೆಗಳಿಗೆ ಸಾಮೂಹಿಕ ಮನವಿ ಸಲ್ಲಿಸುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

Related posts

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ವಿ.ಹಿಂ.ಪ. ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಘಟಕದ ವತಿಯಿಂದ ಯೋಗ ದಿನಾಚರಣೆ

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಉಜಿರೆ ಹಳೆಪೇಟೆಯಲ್ಲಿ ಹೊಳೆಯಂತಾದ ರಸ್ತೆ: ವಾಹನ ಸವಾರರ ಪರದಾಟ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!