August 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ನಿಡ್ಲೆ–ಕಾಟ್ಲಾದಲ್ಲಿ ಏರ್‌ಟೆಲ್ ಟವರ್ ಸಮಸ್ಯೆ: 2–3 ವರ್ಷಗಳಿಂದ ಸಂಕಷ್ಟದಲ್ಲಿರುವ ಗ್ರಾಮಸ್ಥರು

ಬೆಳ್ತಂಗಡಿ : ನಿಡ್ಲೆ–ಕಾಟ್ಲಾ ಪ್ರದೇಶದಲ್ಲಿರುವ ಏರ್‌ಟೆಲ್ ಮೊಬೈಲ್ ಟವರ್ ಕಳೆದ 2–3 ವರ್ಷಗಳಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರ ಪರಿಣಾಮವಾಗಿ ಕರೆ (Call) ಸೇವೆ ಪದೇಪದೇ ಕಡಿತಗೊಳ್ಳುತ್ತಿದ್ದು, ಇಂಟರ್ನೆಟ್ ಡೇಟಾ ಸೇವೆ ಹೆಸರಿಗೆ ಮಾತ್ರ ಉಳಿದಿದೆ.

ವಿಶೇಷವಾಗಿ ಪುದುವೆಟ್ಟು ಗ್ರಾಮದ ಮೇಲಿನಡ್ಕ, ಸುರಳ್ಳಿ ಹಾಗೂ ಮಡ್ಯಾ ಭಾಗಗಳಲ್ಲಿ ಏರ್‌ಟೆಲ್ ನೆಟ್‌ವರ್ಕ್ ಮತ್ತು ಇಂಟರ್ನೆಟ್ ಸೇವೆ ಬಹುತೇಕ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ವಿದ್ಯಾರ್ಥಿಗಳ ಆನ್‌ಲೈನ್ ಶಿಕ್ಷಣ, ರೈತರ ಮಾಹಿತಿ ವಿನಿಮಯ, ಡಿಜಿಟಲ್ ಬ್ಯಾಂಕಿಂಗ್, ಯುಪಿಐ ಪಾವತಿಗಳು, ವ್ಯಾಪಾರ–ವಹಿವಾಟು ಹಾಗೂ ತುರ್ತು ಸಂದರ್ಭಗಳಲ್ಲಿ ಸಂಪರ್ಕ ಸಾಧಿಸುವುದಕ್ಕೂ ತೀವ್ರ ತೊಂದರೆ ಉಂಟಾಗಿದೆ.

ಈ ಕುರಿತು ಏರ್‌ಟೆಲ್ ಗ್ರಾಹಕ ಸೇವೆಗೆ ಸಾರ್ವಜನಿಕರು ಹಲವು ಬಾರಿ ದೂರು ಸಲ್ಲಿಸಿದ್ದರೂ, ಕಳೆದ 2–3 ವರ್ಷಗಳಿಂದ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಟವರ್‌ನ ತಾಂತ್ರಿಕ ದೋಷವನ್ನು ಪರಿಶೀಲಿಸಿ, ಶಾಶ್ವತವಾಗಿ ಸಮಸ್ಯೆ ಪರಿಹರಿಸಿ, ಗುಣಮಟ್ಟದ ಮೊಬೈಲ್ ನೆಟ್‌ವರ್ಕ್ ಮತ್ತು ಇಂಟರ್ನೆಟ್ ಸೇವೆಯನ್ನು ಒದಗಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಸಮಸ್ಯೆ ಮುಂದುವರಿದರೆ ಉನ್ನತ ಅಧಿಕಾರಿಗಳಿಗೆ ಹಾಗೂ ಸಂಬಂಧಿತ ಇಲಾಖೆಗಳಿಗೆ ಸಾಮೂಹಿಕ ಮನವಿ ಸಲ್ಲಿಸುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

Suddi Udaya

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

Suddi Udaya

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ‍್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya

ಬೆಳ್ತಂಗಡಿ ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಫಂಡಿಜೆವಾಳ್ಯ ಶಾಲೆಯಲ್ಲಿ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!