August 5, 2026
ಅಪರಾಧ ಸುದ್ದಿ

ಫರಂಗಿಪೇಟೆಮಹಮ್ಮದ್ ರಿಯಾಜ್ ಗೆ6 ತಿಂಗಳ ಜೈಲು ಶಿಕ್ಷೆ‌ ಹಾಗೂ ರೂ .10, ಸಾವಿರ ದಂಡ

ಬೆಳ್ತಂಗಡಿ:
2015 ಜು.23ರಂದು ಬೆಳ್ತಂಗಡಿ ತಾಲೂಕು ಕಛೇರಿ ಬಳಿ, ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ವಲಯ ಎಂಬ ಸಂಘಟನೆಯ ವತಿಯಿಂದ ನಡೆಯುತ್ತಿದ್ದ ಪ್ರತಿಭಟನಾ ಸಭೆಯಲ್ಲಿ, ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ, ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 315/2015, ಕಲಂ: 153(A)295(A) ಭಾ.ದಂ.ಸಂ (IPC)ರಂತೆ ಪ್ರಕರಣ ದಾಖಲಾಗಿತ್ತು.

ಸದ್ರಿ ಪ್ರಕರಣದ ತನಿಖೆ ನಡೆಸಿದ ಅಂದಿನ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸದ್ರಿ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ರವಿ ಬಿ.ಎಸ್ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಬೆಳ್ತಂಗಡಿಗೆ ಪ್ರಿನ್ಸಿಪಲ್ ಸಿ ಜೆ & ಜೆ ಎಮ್ ಎಫ್
ನ್ಯಾಯಾಲಯಕ್ಕೆ ದೊಷಾರೊಪಣಾ ಪಟ್ಟಿ ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ರಾಮಲಿಂಗಪ್ಪರವರು
ಕಲಂ : 153(A) ಅಡಿಯಲ್ಲಿ 6 ತಿಂಗಳ ಸಾದಾ ಕಾರಗೃಹ ವಾಸ ಮತ್ತು 10,000 ದಂಡ ವಿಧಿಸಿ ಅದೇಶಿಸಿರುತ್ತಾರೆ.
ಸರಕಾರಿ ಅಭಿಯೋಜಕರಾದ ಶ್ರೀಮತಿ ಆಶೀತರವರು ಸಮರ್ಥವಾಗಿ ವಾದಮಂಡನೆ ನಡೆಸಿದ್ದರು.

Related posts

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya

ನೊಂದವರಿಗೆ ಸಹಾಯ ಮಾಡುತ್ತಿರುವುದಾಗಿ ಹೇಳಿ ರೂ.3.20 ಲಕ್ಷ ವಂಚನೆ ಆರೋಪ ಬೆಂಗಳೂರಿನ ಮಹಿಳೆ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya

ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯಲ್ಲಿ ಎರಡು ದಿನದ ಸಿಐಡಿ ಶೋಧ ಅಂತ್ಯ

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya
error: Content is protected !!