August 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಎಫ್.ಡಿ.ಪಿ ಕಾರ್ಯಾಗಾರದ ಮಾಹಿತಿ ಕೈಪಿಡಿ ಬಿಡುಗಡೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ತಾಂತ್ರಿಕ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC), ವಿಜ್ಞಾನ ಹಾಗೂ ಗ್ರಂಥಾಲಯ ವಿಭಾಗ ಮತ್ತು ಮಹಾವಿದ್ಯಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಆಯೋಜನೆಗೊಳ್ಳಲಿರುವ ಐದು ದಿನಗಳ ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ (Faculty Development Programme – FDP) ದ ಆಮಂತ್ರಣ ಪತ್ರಿಕೆ ಹಾಗೂ ಕಾರ್ಯಾಗಾರದ ಉದ್ದೇಶ ಮತ್ತು ವಿವರಣೆಯನ್ನು ಹೊಂದಿರುವ ಮಾಹಿತಿ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್, ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್ ಹಾಗೂ ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ ಸಮ್ಮುಖದಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕ ಪ್ರೊ. ಎಸ್.ಎನ್ ಕಾಕತ್ಕಾರ್ , ಕಾಲೇಜಿನ ಪ್ರಾಚಾರ್ಯರಾದ ಡಾ. ಸಂದೀಪ್ ಆರ್., ಕಾಲೇಜಿನ ಪ್ರಬಂಧಕರಾದ ರಾಜವರ್ಮ , ಕಾರ್ಯಾಗಾರದ ಸಂಯೋಜಕರಾದ ಡಾ. ರಜತ ಪಿ. ಶೆಟ್ಟಿ ಹಾಗು ಡಾ. ನವೀನ್ ಕುಮಾರ್ ಕಾರ್ಯಾಗಾರ ಆಯೋಜನಾ ಸಮಿತಿಯ ಕಾರ್ಯದರ್ಶಿಗಳಾದ ಡಾ. ವಿದ್ಯಾ ಕೆ, ಡಾ. ನಿತ್ಯಾನಂದ ಬಿ. ಡಾ. ಗಿರೀಶ್ ಕುಮಾರ್ ಸೇರಿದಂತೆ ಡಾ. ರವೀಶ್ ಪಡುಮಲೆ, ಡಾ. ತ್ಯಾಗರಾಜ್ ಮತ್ತು ಇತರೆ ಪ್ರಮುಖರು ಉಪಸ್ಥಿತರಿದ್ದರು.

ರಾಷ್ಟ್ರ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಗಾರವು ಇದೇ ಬರುವ ಆಗಸ್ಟ್ 18 ರಿಂದ 22ರವರೆಗೆ ಐದು ದಿನಗಳ ವರೆಗೆ ಕಾಲೇಜಿನಲ್ಲಿ ನಡೆಯಲಿದೆ. ಮುಂದಿನ ತಲೆಮಾರಿನ ಶೈಕ್ಷಣಿಕ ಕ್ಷೇತ್ರದ ಕೃತಕ ಬುದ್ಧಿಮತ್ತೆ (AI) ಆಧಾರಿತ ಬೋಧನೆ, ಸಂಶೋಧನೆ ಮತ್ತು ಆವಿಷ್ಕಾರ ವಿಷಯದಡಿ ಕಾರ್ಯಾಗಾರವು ಸಾಗಿಬರಲಿದೆ. ಕಾರ್ಯಗಾರದಲ್ಲಿ ರಾಷ್ಟ್ರೀಯ ಮಟ್ಟದ ವಿವಿಧ ವಿಷಯಗಳ ತಜ್ಞರು ಪಾಲ್ಗೊಳ್ಳಲಿದ್ದಾರೆ.

ಈ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮವು ಕೃತಕ ಬುದ್ಧಿಮತ್ತೆ (AI) ಆಧಾರಿತ ಬೋಧನೆ, ಸಂಶೋಧನೆ ಹಾಗೂ ಆವಿಷ್ಕಾರಗಳ ಇತ್ತೀಚಿನ ಬೆಳವಣಿಗೆಗಳನ್ನು ಪರಿಚಯಿಸುವುದರ ಜೊತೆಗೆ, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ AI ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಲು ಅಗತ್ಯವಾದ ಜ್ಞಾನ ಮತ್ತು ಕೌಶಲ್ಯಗಳನ್ನು ಅಧ್ಯಾಪಕರಿಗೆ ಒದಗಿಸುವ ಉದ್ದೇಶವನ್ನು ಹೊಂದಿದೆ

Related posts

ನಿಡಿಗಲ್: ನಡ್ವಾಲ್ ಸಿರಿಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಸುಲ್ಕೇರಿಮೊಗ್ರು, ಬಿಲ್ಲವ ಸಂಘದ ಸದಸ್ಯರಿಂದ ಶಿವಗಿರಿ ತೀರ್ಥಯಾತ್ರೆ

Suddi Udaya

ಧರ್ಮಸ್ಥಳ: ಸಾಮೂಹಿಕ ವಿವಾಹ ನೋಂದಾವಣಾ ಕಛೇರಿ ಉದ್ಘಾಟನೆ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya
error: Content is protected !!