32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯಾಗಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ನೇಮಕ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರಾದ ಮಂಜುನಾಥ್ ಎಚ್.ಎಸ್. ಅವರ ಆದೇಶದಂತೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಕಾರ್ಯದರ್ಶಿ ಬೆಳ್ತಂಗಡಿಯ ಅಭಿನಂದನ್ ಹರೀಶ್ ಕುಮಾರ್ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಈ ನೇಮಕದ ಮೂಲಕ ಉತ್ತರ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ. ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯನ್ನು ಬಲಿಷ್ಠಗೊಳಿಸುವುದು, ಯುವಕರನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯುವುದು ಹಾಗೂ ಪಕ್ಷದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.

ಅಭಿನಂದನ್ ಹರೀಶ್ ಕುಮಾರ್ ಈ ಹಿಂದೆ ಮಂಡ್ಯ ಜಿಲ್ಲಾ ಉಸ್ತುವಾರಿಯ ಜವಾಬ್ದಾರಿ ವಹಿಸಿಕೊಂಡು ಯುವ ಕಾಂಗ್ರೆಸ್ ನ ಪಕ್ಷ ಸಂಘಟನೆಯನ್ನು ಪ್ರಬಲಗೊಳಿಸುವ ಮೂಲಕ ರಾಜ್ಯದ ಕಾಂಗ್ರೆಸ್ ಪಕ್ಷದ ನಾಯಕರ ಗಮನ ಸೆಳೆದಿದ್ದರು‌.

ಯುವ ಸಂಘಟಕರಾಗಿ,ಯುವ ಉದ್ಯಮಿಯಾಗಿ,ದಾನಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವ ಅಭಿನಂದನ್ ಹರೀಶ್ ಕುಮಾರ್ ಅವರ ಉತ್ತರ ಕನ್ನಡದ ಜವಾಬ್ದಾರಿ ವಹಿಸಿಕೊಂಡಿದ್ದು ಯುವ ಕಾಂಗ್ರೆಸ್ ಗೆ ಇನ್ನಷ್ಟು ಬಲ ಬಂದತಾಗಿದೆ.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya

ಕರಿಮಣೇಲು: ಗಾಂಧಿನಗರ ನಿವಾಸಿ ಹಸನಬ್ಬ ನಿಧನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ನೈನಾಡು ಶ್ರೀ ರಾಮ ಭಜನಾ ಮಂದಿರದಲ್ಲಿ ವೈಭವದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ

Suddi Udaya
error: Content is protected !!