August 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಗ್ರಾಮ ಪಂಚಾಯತ್ ಗ್ರಾಮ ಸಭೆ

ನಡ: ನಡ ಗ್ರಾಮ ಪಂಚಾಯತ್ ನ 2026-27ನೇ ಸಾಲಿನ ಪ್ರಥಮ ಗ್ರಾಮ ಸಭೆಯು ನಡ ಗ್ರಾ.ಪಂ. ಸಭಾಂಗಣದಲ್ಲಿ ಆ. 4 ರಂದು ಆಡಳಿತಾಧಿಕಾರಿ ರಮೇಶ್ ಪಿ. ಕೆ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಆಗಮಿಸಿದ್ದರು.

ಗ್ರಾಮಸಭೆಗೆ ಇಲಾಖಾಧಿಕಾರಿಗಳು ಬರದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು, ನಮ್ಮ ಸಮಸ್ಯೆಗಳನ್ನು ಹೇಳಲು ಇಲಾಖಾಧಿಕಾರಿಗಳೇ ಬರದಿದ್ದರೆ ಮತ್ತೆ ಗ್ರಾಮಸಭೆ ಯಾಕೆ ಎಂದು ಪ್ರಶ್ನಿಸಿದಾಗ ಪಿಡಿಒ ಕೆಲ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಿದರು. ನಂತರ ಇಲಾಖಾಧಿಕಾರಿಗಳಿಂದ ಮಾಹಿತಿ ನಡೆಯಿತು.


ಈ ಸಂದರ್ಭದಲ್ಲಿ ಕಳೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ರಲ್ಲಿ 625 ಅಂಕ ಪಡೆದ ಕನ್ಯಾಡಿ ಗ್ರಾಮದ ಕೈಲಾಜೆ ಹರ್ಷೆಂದ್ರ ಮತ್ತು ಶಾರದಾ ದಂಪತಿಯ ಪುತ್ರಿ ಅನನ್ಯ ಇವರನ್ನು ಸನ್ಮಾನಿಸಲಾಯಿತು.

ಪಂ. ಅಭಿವೃದ್ಧಿ ಅಧಿಕಾರಿ ತಾರಾನಾಥ್ ಕೆ. ನಾಯ್ಕ್ ಸ್ವಾಗತಿಸಿದರು. ಕಾರ್ಯದರ್ಶಿ ಕಿರಣ್ ಎಂ. ರವರು ಅನುಪಾಲನಾ & ವಾರ್ಡ್ ಸಭೆ ವರದಿ ನೀಡಿದರು. ಸಿಬ್ಬಂದಿ ಭಾರತಿ ಜಮಾ – ಖರ್ಚು ವರದಿ ನೀಡಿದರು. ಸಿಬ್ಬಂದಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿ , ಧನ್ಯವಾದವಿತ್ತರು.

Related posts

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ವಸತಿ ಶಾಲೆ ಮತ್ತು ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ

Suddi Udaya

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ಸ್ಕೂಟಿಗೆ- ಆಟೋ ರಿಕ್ಷಾ ಡಿಕ್ಕಿ ಪ್ರಕರಣ: ಆಟೋ ಚಾಲಕನಿಗೆ ಕಾರಾಗೃಹ ಶಿಕ್ಷೆ ಪ್ರಕಟ

Suddi Udaya
error: Content is protected !!