August 4, 2026
ಅಪರಾಧ ಸುದ್ದಿ

ಫರಂಗಿಪೇಟೆಮಹಮ್ಮದ್ ರಿಯಾಜ್ ಗೆ6 ತಿಂಗಳ ಜೈಲು ಶಿಕ್ಷೆ‌ ಹಾಗೂ ರೂ .10, ಸಾವಿರ ದಂಡ

ಬೆಳ್ತಂಗಡಿ:
2015 ಜು.23ರಂದು ಬೆಳ್ತಂಗಡಿ ತಾಲೂಕು ಕಛೇರಿ ಬಳಿ, ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ವಲಯ ಎಂಬ ಸಂಘಟನೆಯ ವತಿಯಿಂದ ನಡೆಯುತ್ತಿದ್ದ ಪ್ರತಿಭಟನಾ ಸಭೆಯಲ್ಲಿ, ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ, ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 315/2015, ಕಲಂ: 153(A)295(A) ಭಾ.ದಂ.ಸಂ (IPC)ರಂತೆ ಪ್ರಕರಣ ದಾಖಲಾಗಿತ್ತು.

ಸದ್ರಿ ಪ್ರಕರಣದ ತನಿಖೆ ನಡೆಸಿದ ಅಂದಿನ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸದ್ರಿ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ರವಿ ಬಿ.ಎಸ್ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಬೆಳ್ತಂಗಡಿಗೆ ಪ್ರಿನ್ಸಿಪಲ್ ಸಿ ಜೆ & ಜೆ ಎಮ್ ಎಫ್
ನ್ಯಾಯಾಲಯಕ್ಕೆ ದೊಷಾರೊಪಣಾ ಪಟ್ಟಿ ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ರಾಮಲಿಂಗಪ್ಪರವರು
ಕಲಂ : 153(A) ಅಡಿಯಲ್ಲಿ 6 ತಿಂಗಳ ಸಾದಾ ಕಾರಗೃಹ ವಾಸ ಮತ್ತು 10,000 ದಂಡ ವಿಧಿಸಿ ಅದೇಶಿಸಿರುತ್ತಾರೆ.
ಸರಕಾರಿ ಅಭಿಯೋಜಕರಾದ ಶ್ರೀಮತಿ ಆಶೀತರವರು ಸಮರ್ಥವಾಗಿ ವಾದಮಂಡನೆ ನಡೆಸಿದ್ದರು.

Related posts

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

Suddi Udaya

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya

ಗುರಿಪಳ್ಳದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya
error: Content is protected !!