23.4 C
ಪುತ್ತೂರು, ಬೆಳ್ತಂಗಡಿ
August 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿರಾಜಕೀಯ

ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ – ವೈಯಕ್ತಿಕ ನೆಲೆಯಲ್ಲಿ ಆಥಿ೯ಕ ಸಹಾಯ ಹಸ್ತಾಂತರ

ಬೆಳ್ತಂಗಡಿ : ಕಳೆದ ಎರಡು ದಿನಗಳ ಹಿಂದೆ ಧಾರಕಾರ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಲ್ಲದೆ, ಸಂಕಷ್ಟ ಎದುರಿಸುತ್ತಿರುವ ಕುಟುಂಬಸ್ಥರಿಗೆ ವೈಯಕ್ತಿಕ ನೆಲೆಯಲ್ಲಿ ಆರ್ಥಿಕ ನೆರವು ನೀಡಿದರು.ಗ್ರಾಮದ ಗಾಣದಕೊಟ್ಟಿಗೆ ನಿವಾಸಿ ಗಂಗಾಧರ ಗೌಡ ಎಂಬವರ ಮನೆ ಬಳಿಯ ತಡೆಗೋಡೆ ಕುಸಿದು ಮನೆಗೆ ಹಾನಿಯಾಗಿತ್ತು. ಮುಂಡಾಜೆ ಗ್ರಾಮದ ನಿವಾಸಿ ಚೋಮು ನಲಿಕೆ ಎಂಬವರ ಮನೆ ಭಾರಿ ಮಳೆಗೆ ಕುಸಿದು ಬಿದ್ದಿತ್ತು. ಸತ್ಯನಪಲ್ಕೆ ನಿವಾಸಿ ಯಮುನಾ ಎಂಬವರ ಮನೆಯೂ ಹಾನಿಯಾಗಿತ್ತು.

ಧರ್ಮಸ್ಥಳ ಗ್ರಾಮ ಕಟ್ಟದ ಬೈಲು ನಾರಾಯಣ ಗೌಡ, ಅನಂತ ಶೆಟ್ಟಿಗಾರ್ ಮನೆಯ ಹಿಂಬದಿಯ ಗುಡ್ಡ ಕುಸಿದು, ಸಮಸ್ಯೆ ಎದುರಾಗಿತ್ತು. ಮಾಹಿತಿ ಪಡೆದ ಶಾಸಕರು ಹಾನಿಗೊಂಡ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಧರ್ಮಸ್ಥಳ ಗ್ರಾಮದ ಎರಡು ಕುಟುಂಬಗಳಿಗೆ ಆರ್ಥಿಕ ನೆರವಿಗಾಗಿ ಚೆಕ್‌ ವಿತರಿಸಿದರು.ಮನೆಯವರೊಂದಿಗೆ ಮಾತನಾಡಿದ ಅವರು, ತಕ್ಷಣವೇ ಮಳೆ ಹಾನಿ ಪರಿಹಾರವನ್ನು ನೀಡುವ ಭರವಸೆಯನ್ನೂ ನೀಡಿದರು.

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

Suddi Udaya

ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೂಡಾಯಿಬೆಟ್ಟು ಸರಕಾರಿ ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬಿಜೆಪಿ ನಾವೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರದೀಪ್ ನಾಗಜೆ ಆಯ್ಕೆ

Suddi Udaya
error: Content is protected !!