August 4, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಕೋಳಿ ಅಂಕದ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

ಬೆಳ್ತಂಗಡಿ : ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿ, ಕೋಳಿ ಅಂಕ ನಡೆಸಲು ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಂ ನೇತೃತ್ವದ ತಂಡ ಆ.4 ರಂದು ಮಧ್ಯಾಹ್ನ 2 ಗಂಟೆಗೆ ದಾಳಿ ಮಾಡಿದ್ದಾರೆ.ಪೊಲೀಸ್ ದಾಳಿ ವೇಳೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಚಂದ್ರಕಾಂತ, ಕುಕ್ಕಾವು ನಿವಾಸಿ ಶೇಖರ, ಕೊಲ್ಲಿ ನಿವಾಸಿ ನಾರಾಯಣ ಎಂಬವರನ್ನು ಬಂಧಿಸಿದ್ದು ಉಳಿದ ಆರೋಪಿಗಳು ಪೊಲೀಸರನ್ನು ನೋಡಿ ಪರಾರಿಯಾಗಿದ್ದು ಅವರಿಗಾಗಿ ಬಲೆ ಬಿಸಲಾಗಿದೆ.

ದಾಳಿ ವೇಳೆ ಒಂದು ಕೋಳಿ, ಒಂದು ಬಾಳು(ಸಣ್ಣಕತ್ತಿ), 1910 ರೂಪಾಯಿ ಹಣ,ಎರಡು ಮೋಟರ್ ಬೈಕ್, ಒಂದು ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೂವರು ಆರೋಪಿಗಳು ಮತ್ತು ಇತರ ಪರಾರಿಯಾದವರ ವಿರುದ್ಧ ಬಿಎನ್‌ಎಸ್‌ ಕಲಂ 112, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960ರ ಕಲಂ 11(1) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

Suddi Udaya

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಉಜಿರೆ ವಿದ್ಯುತ್ ಕಂಬಗಳ ಸ್ವಚ್ಚತಾ ಶ್ರಮದಾನ

Suddi Udaya

ಪೆಟ್ರೋಲು, ಡೀಸೆಲ್ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರ 2 ರೂ.ಗೆ ಏರಿಕೆ

Suddi Udaya
error: Content is protected !!