ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ ಅವರು ಬೆಳ್ತಂಗಡಿ ತಾಲೂಕು ಪಂಚಾಯತ್ನ ಸಹಾಯಕ ನಿರ್ದೇಶಕರಾಗಿ (ಪ್ರಬಾರ) ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಸಫನಾ ಅವರು ಮೂಲ್ಕಿ ತಾಲೂಕಿಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ತೆರವಾದ ಸ್ಥಾನವನ್ನು ಶ್ರೀಮತಿ ಸಫನಾ ಅವರು ಶ್ರೀಮತಿ ಗಾಯತ್ರಿ ಪಿ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿದರು.
ಗಾಯತ್ರಿ ಅವರು ಹಲವು ಪಂಚಾಯತ್ ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಜನರ ಪ್ರೀತಿ, ವಿಶ್ವಾಸ ಗಳಿಸಿದ ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಮುಂಡಾಜೆ ಗ್ರಾ.ಪಂ ನಲ್ಲಿ ಪಿಡಿಓ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.













