August 5, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು: ವಾರೀಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಮನವಿ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದ ಮಂಜುನಾಥ ಹೋಟೆಲ್ ಬಳಿ ಈ ಭಾವಚಿತ್ರದಲ್ಲಿರುವ ಅಪರಿಚಿತ ವ್ಯಕ್ತಿಯು ಆ.2 ರಂದು ರಾತ್ರಿ ವೇಳೆ ಅಸ್ವಸ್ಥ ಸ್ಥಿತಿಯಲ್ಲಿ ಮಲಗಿದ್ದನ್ನು ಸಾರ್ವಜನಿಕರು ಗಮನಿಸಿದ್ದರು. ಚಿಕಿತ್ಸೆಗಾಗಿ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲು ಆ.3 ರಂದು ಬೆಳಿಗ್ಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯ ವಯಸ್ಸು ಸುಮಾರು 60–65 ವರ್ಷ, ಎತ್ತರ 5.5 ಅಡಿ, ಸಪೂರ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ಕೋಲುಮುಖ ಹೊಂದಿದ್ದು, ಮುಖದಲ್ಲಿ ಕಪ್ಪು-ಬಿಳಿ ಮಿಶ್ರಿತ ಮೀಸೆ ಇದೆ. ತಲೆಯಲ್ಲಿ ಸುಮಾರು 3.5 ಇಂಚು ಉದ್ದದ ಕಪ್ಪು-ಬಿಳಿ ನೆರೆತ ಕೂದಲು ಇದ್ದು, ಎಡ ಕಣ್ಣಿನ ಕೆಳಭಾಗದಲ್ಲಿ ಹಾಗೂ ಎಡ ತೋಳಿನ ಮೇಲೆ ಕಪ್ಪು ಎಳ್ಳು ಮಚ್ಚೆಗಳಿವೆ. ಮೃತರು ಕೆಂಪು ಬಣ್ಣದ ಜರ್ಕಿನ್, ನೀಲಿ ಚೌಕಳಿ ಲುಂಗಿ ಹಾಗೂ “RUPA Jon” ಎಂದು ಬರೆದಿರುವ ನೀಲಿ ಬಣ್ಣದ ಒಳಚಡ್ಡಿ ಧರಿಸಿರುತ್ತಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

ಮೃತ ವ್ಯಕ್ತಿಯ ಗುರುತು ಅಥವಾ ವಾರೀಸುದಾರರ ಬಗ್ಗೆ ಮಾಹಿತಿ ಇರುವವರು ತಕ್ಷಣ ಧರ್ಮಸ್ಥಳ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಧರ್ಮಸ್ಥಳ ಪೊಲೀಸರು ಮನವಿ ಮಾಡಿದ್ದಾರೆ.ಧರ್ಮಸ್ಥಳ ಪೊಲೀಸ್ ಠಾಣೆ 08256-277253, PSI ಧರ್ಮಸ್ಥಳ 7795424204 / 8277986449, CPI ಬೆಳ್ತಂಗಡಿ 9480805336, ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿ 0824-2220500, ಇ-ಮೇಲ್ [email protected] ಸಂಪರ್ಕಿಸಲು ಕೊರಲಾಗಿದೆ.

Related posts

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

Suddi Udaya

“ವಿಮಾ ಗ್ರಾಮ” ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya

ಚೆನ್ನೈನಲ್ಲಿ ಧೂಳೆಬ್ಬಿಸಿದ ದಕ್ಷಿಣ ಕನ್ನಡದ ಹುಡುಗಿಯರು,ಆಲ್ ಇಂಡಿಯಾ ಥ್ರೋಬಾಲ್ ಕೂಟದಲ್ಲಿ ಪ್ರಚಂಡ ಸಾಧನೆ ಮುಳಿಯ ಜ್ಯುವೆಲ್ಸ್ ನಿಂದ ಸಮವಸ್ತ್ರ ಕೊಡುಗೆ

Suddi Udaya

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!