32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯಾಗಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ನೇಮಕ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರಾದ ಮಂಜುನಾಥ್ ಎಚ್.ಎಸ್. ಅವರ ಆದೇಶದಂತೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಕಾರ್ಯದರ್ಶಿ ಬೆಳ್ತಂಗಡಿಯ ಅಭಿನಂದನ್ ಹರೀಶ್ ಕುಮಾರ್ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಈ ನೇಮಕದ ಮೂಲಕ ಉತ್ತರ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ. ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯನ್ನು ಬಲಿಷ್ಠಗೊಳಿಸುವುದು, ಯುವಕರನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯುವುದು ಹಾಗೂ ಪಕ್ಷದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.

ಅಭಿನಂದನ್ ಹರೀಶ್ ಕುಮಾರ್ ಈ ಹಿಂದೆ ಮಂಡ್ಯ ಜಿಲ್ಲಾ ಉಸ್ತುವಾರಿಯ ಜವಾಬ್ದಾರಿ ವಹಿಸಿಕೊಂಡು ಯುವ ಕಾಂಗ್ರೆಸ್ ನ ಪಕ್ಷ ಸಂಘಟನೆಯನ್ನು ಪ್ರಬಲಗೊಳಿಸುವ ಮೂಲಕ ರಾಜ್ಯದ ಕಾಂಗ್ರೆಸ್ ಪಕ್ಷದ ನಾಯಕರ ಗಮನ ಸೆಳೆದಿದ್ದರು‌.

ಯುವ ಸಂಘಟಕರಾಗಿ,ಯುವ ಉದ್ಯಮಿಯಾಗಿ,ದಾನಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವ ಅಭಿನಂದನ್ ಹರೀಶ್ ಕುಮಾರ್ ಅವರ ಉತ್ತರ ಕನ್ನಡದ ಜವಾಬ್ದಾರಿ ವಹಿಸಿಕೊಂಡಿದ್ದು ಯುವ ಕಾಂಗ್ರೆಸ್ ಗೆ ಇನ್ನಷ್ಟು ಬಲ ಬಂದತಾಗಿದೆ.

Related posts

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya

ಯೋಗಸಾನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

Suddi Udaya

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya
error: Content is protected !!