28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಗ್ರಾಮ ಪಂಚಾಯತ್ ಗ್ರಾಮ ಸಭೆ

ನಡ: ನಡ ಗ್ರಾಮ ಪಂಚಾಯತ್ ನ 2026-27ನೇ ಸಾಲಿನ ಪ್ರಥಮ ಗ್ರಾಮ ಸಭೆಯು ನಡ ಗ್ರಾ.ಪಂ. ಸಭಾಂಗಣದಲ್ಲಿ ಆ. 4 ರಂದು ಆಡಳಿತಾಧಿಕಾರಿ ರಮೇಶ್ ಪಿ. ಕೆ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಆಗಮಿಸಿದ್ದರು.

ಗ್ರಾಮಸಭೆಗೆ ಇಲಾಖಾಧಿಕಾರಿಗಳು ಬರದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು, ನಮ್ಮ ಸಮಸ್ಯೆಗಳನ್ನು ಹೇಳಲು ಇಲಾಖಾಧಿಕಾರಿಗಳೇ ಬರದಿದ್ದರೆ ಮತ್ತೆ ಗ್ರಾಮಸಭೆ ಯಾಕೆ ಎಂದು ಪ್ರಶ್ನಿಸಿದಾಗ ಪಿಡಿಒ ಕೆಲ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಿದರು. ನಂತರ ಇಲಾಖಾಧಿಕಾರಿಗಳಿಂದ ಮಾಹಿತಿ ನಡೆಯಿತು.


ಈ ಸಂದರ್ಭದಲ್ಲಿ ಕಳೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ರಲ್ಲಿ 625 ಅಂಕ ಪಡೆದ ಕನ್ಯಾಡಿ ಗ್ರಾಮದ ಕೈಲಾಜೆ ಹರ್ಷೆಂದ್ರ ಮತ್ತು ಶಾರದಾ ದಂಪತಿಯ ಪುತ್ರಿ ಅನನ್ಯ ಇವರನ್ನು ಸನ್ಮಾನಿಸಲಾಯಿತು.

ಪಂ. ಅಭಿವೃದ್ಧಿ ಅಧಿಕಾರಿ ತಾರಾನಾಥ್ ಕೆ. ನಾಯ್ಕ್ ಸ್ವಾಗತಿಸಿದರು. ಕಾರ್ಯದರ್ಶಿ ಕಿರಣ್ ಎಂ. ರವರು ಅನುಪಾಲನಾ & ವಾರ್ಡ್ ಸಭೆ ವರದಿ ನೀಡಿದರು. ಸಿಬ್ಬಂದಿ ಭಾರತಿ ಜಮಾ – ಖರ್ಚು ವರದಿ ನೀಡಿದರು. ಸಿಬ್ಬಂದಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿ , ಧನ್ಯವಾದವಿತ್ತರು.

Related posts

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

Suddi Udaya

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಕರಾಯ – ಇಳಂತಿಲ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತ

Suddi Udaya

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya
error: Content is protected !!