23.2 C
ಪುತ್ತೂರು, ಬೆಳ್ತಂಗಡಿ
August 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿರಾಜಕೀಯ

ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ – ವೈಯಕ್ತಿಕ ನೆಲೆಯಲ್ಲಿ ಆಥಿ೯ಕ ಸಹಾಯ ಹಸ್ತಾಂತರ

ಬೆಳ್ತಂಗಡಿ : ಕಳೆದ ಎರಡು ದಿನಗಳ ಹಿಂದೆ ಧಾರಕಾರ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಲ್ಲದೆ, ಸಂಕಷ್ಟ ಎದುರಿಸುತ್ತಿರುವ ಕುಟುಂಬಸ್ಥರಿಗೆ ವೈಯಕ್ತಿಕ ನೆಲೆಯಲ್ಲಿ ಆರ್ಥಿಕ ನೆರವು ನೀಡಿದರು.ಗ್ರಾಮದ ಗಾಣದಕೊಟ್ಟಿಗೆ ನಿವಾಸಿ ಗಂಗಾಧರ ಗೌಡ ಎಂಬವರ ಮನೆ ಬಳಿಯ ತಡೆಗೋಡೆ ಕುಸಿದು ಮನೆಗೆ ಹಾನಿಯಾಗಿತ್ತು. ಮುಂಡಾಜೆ ಗ್ರಾಮದ ನಿವಾಸಿ ಚೋಮು ನಲಿಕೆ ಎಂಬವರ ಮನೆ ಭಾರಿ ಮಳೆಗೆ ಕುಸಿದು ಬಿದ್ದಿತ್ತು. ಸತ್ಯನಪಲ್ಕೆ ನಿವಾಸಿ ಯಮುನಾ ಎಂಬವರ ಮನೆಯೂ ಹಾನಿಯಾಗಿತ್ತು.

ಧರ್ಮಸ್ಥಳ ಗ್ರಾಮ ಕಟ್ಟದ ಬೈಲು ನಾರಾಯಣ ಗೌಡ, ಅನಂತ ಶೆಟ್ಟಿಗಾರ್ ಮನೆಯ ಹಿಂಬದಿಯ ಗುಡ್ಡ ಕುಸಿದು, ಸಮಸ್ಯೆ ಎದುರಾಗಿತ್ತು. ಮಾಹಿತಿ ಪಡೆದ ಶಾಸಕರು ಹಾನಿಗೊಂಡ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಧರ್ಮಸ್ಥಳ ಗ್ರಾಮದ ಎರಡು ಕುಟುಂಬಗಳಿಗೆ ಆರ್ಥಿಕ ನೆರವಿಗಾಗಿ ಚೆಕ್‌ ವಿತರಿಸಿದರು.ಮನೆಯವರೊಂದಿಗೆ ಮಾತನಾಡಿದ ಅವರು, ತಕ್ಷಣವೇ ಮಳೆ ಹಾನಿ ಪರಿಹಾರವನ್ನು ನೀಡುವ ಭರವಸೆಯನ್ನೂ ನೀಡಿದರು.

Related posts

ಮರೋಡಿ: ಹಾರೋದ್ದು ನಿವಾಸಿ ಗೀತಾ ನಿಧನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ಸ್ವಚ್ಛತಾ ಕಾರ್ಯಕ್ರಮ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

Suddi Udaya

ಉಜಿರೆ: ಎಸ್. ಡಿ. ಎಂ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!