24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್‌ಸೆಟ್ ನಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸುವಿಕೆ ಮತ್ತು ಸರ್ವಿಸ್ ತರಬೇತಿ ಸಮಾರೋಪ ಸಮಾರಂಭ

ಉಜಿರೆ : ಉದ್ಯಮದಲ್ಲಿ ಯಶಸ್ಸು ಸಾಧಿಸಲು ಬೇರೆಯವರ ಬೆಂಬಲವನ್ನು ನಿರೀಕ್ಷಿಸದೆ ಸ್ವಂತ ಪರಿಶ್ರಮ, ಆತ್ಮವಿಶ್ವಾಸ ಹಾಗೂ ದೃಢ ಸಂಕಲ್ಪದೊಂದಿಗೆ ಮುನ್ನಡೆಯಬೇಕು ಎಂದು ಉಜಿರೆಯ “ರಮ್ಯ ಫ್ಯಾನ್ಸಿ ಮಾಲಕರು ಹಾಗೂ ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ.ಎಸ್ ಅವರು ಹೇಳಿದರು.

ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ ಆಯೋಜಿಸಲಾದ ಸಿ.ಸಿ. ಕ್ಯಾಮೆರಾ ಅಳವಡಿಸುವಿಕೆ ಮತ್ತು ಸರ್ವಿಸ್ ತರಬೇತಿ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಮಾತನಾಡಿದರು. ತಮ್ಮ ಉದ್ಯಮ ಪಯಣದ ಅನುಭವಗಳನ್ನು ಹಂಚಿಕೊಂಡ ಅವರು, ಉದ್ಯಮದ ಬೆಳವಣಿಗೆ, ಸವಾಲುಗಳನ್ನು ಎದುರಿಸುವ ಬಗೆ ಹಾಗೂ ಯಶಸ್ಸಿನ ಸೂತ್ರಗಳ ಕುರಿತು ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ. ವಿಜಯ ಕುಮಾರ್ ಅವರು ಮಾತನಾಡಿ, ಇಂದಿನ ಆಧುನಿಕ ತಂತ್ರಜ್ಞಾನಗಳನ್ನು ಸಮರ್ಥವಾಗಿ ಬಳಸಿಕೊಂಡು ಉದ್ಯಮದಲ್ಲಿ ಪ್ರಗತಿ ಸಾಧಿಸಬೇಕು ಎಂದು ಕರೆ ನೀಡಿದರು.

ತರಬೇತಿಯ ಅತಿಥಿ ಉಪನ್ಯಾಸಕಾ ಗುರುರಾಜ್ ಕೆ.ಎಸ್ ಅವರು ಮಾತನಾಡಿ ತರಬೇತಿಯನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಶುಭ ಹಾರೈಸಿದರು. ಸಂಸ್ಥೆಯ ನಿರ್ದೇಶಕ ಸುನಿಲ್ ಜಿ. ನಾಯ್ಕೆ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.  ಉಪನ್ಯಾಸಕ ಕೆ. ಕರುಣಾಕರ ಜೈನ್ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವು ರಮೇಶ್, ನಿಖಿಲ್ ಹಾಗೂ ಜಗನ್ನಾಥ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಾದ ಜಗದೀಶ್ ಹಾಗೂ ಅಶೋಕ್ ಅವರು ತರಬೇತಿಯ ಅನುಭವಗಳನ್ನು ಹಂಚಿಕೊಂಡರು.

Related posts

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಶಿರ್ಲಾಲು :ಬೆಳ್ತಂಗಡಿ ಕೋಟಿ ಚೆನ್ನಯ ಕ್ರೀಡಾಕೂಟ 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಾಗಾರ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!