25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತ್ ಸ್ಕೌಟ್ಸ್ & ಗೈಡ್ಸ್ ವತಿಯಿಂದ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

ಧರ್ಮಸ್ಥಳ : ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆಯನ್ನು ಆಚರಿಸಲಾಯಿತು.

ವಿಶ್ವ ಸ್ಕಾರ್ಫ್ ದಿನಾಚರಣೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಶ್ರೀಮತಿ ಪರಿಮಳ ಎಂ.ವಿ ಇವರಿಗೆ ಸ್ಕಾರ್ಫ್ ತೊಡಿಸಿ ಗೌರವ ವಂದನೆಯನ್ನು ಸಲ್ಲಿಸಲಾಯಿತು. ಶಾಲಾ ಕಬ್ ಮಾಸ್ಟರ್ ಶ್ರೀಮತಿ ಅಮೃತಾ ವಿ.ಶೆಟ್ಟಿ ಇವರು ಸ್ಕಾರ್ಫ್ ದಿನದ ಮಹತ್ವ ವಿವರಿಸಿದರು. ಬಳಿಕ ಬನ್ನಿ ವಿದ್ಯಾರ್ಥಿಗಳಿಗೆ ಏಪ್ರಾನ್ ತೊಡಿಸಿ, ಹೊಸದಾಗಿ ಸೇರ್ಪಡೆಗೊಂಡ ಕಬ್ ಬುಲ್ ಬುಲ್ ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳಿಗೆ ಸ್ಕಾರ್ಫ್ ತೊಡಿಸಿ ಸ್ವಾಗತಿಸಲಾಯಿತು.

ಕಬ್ ಮಾಸ್ಟರ್ ಶ್ರೀಮತಿ ಹೇಮಾವತಿ ಕಬ್ ಹಾಗೂ ಬುಲ್ ಬುಲ್ ಪ್ರತಿಜ್ಞೆ ಹಾಗೂ ನಿಯಮ ಹೇಳಿದರು.ಸ್ಕೌಟ್ ಮಾಸ್ಟರ್ ಶ್ರೀಮತಿ ಶಶಿಕಲಾ ಸ್ಕೌಟ್ ಪ್ರತಿಜ್ಞೆ ಅನ್ನು ಬೋಧಿಸಿದರು. ಗೈಡ್ ಕ್ಯಾಪ್ಟನ್ ಶ್ರೀಮತಿ ದೀಕ್ಷಾ ನಿಯಮ ಬೋಧಿಸಿದರು.ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರು ಮಾತನಾಡುತ್ತಾ ಸ್ಕಾರ್ಫ್ ಮಹತ್ವ ಉದ್ದೇಶ ,ಸಮವಸ್ತ್ರದ ಮಹತ್ವ ಹಾಗೂ ಅದನ್ನು ಧರಿಸುವವರ ಕೆಲಸ ಕಾರ್ಯಗಳು ಜವಾಬ್ದಾರಿ,ಅದನ್ನು ನಿಭಾಯಿಸಬೇಕಾದ ಅಗತ್ಯತೆ ಹಾಗೂ ನಿರ್ವಹಿಸುವ ರೀತಿ ಹೇಗಿರಬೇಕು ಎಂಬುದನ್ನು ವಿವರಿಸಿದರು. ಕಾರ್ಯಕ್ರಮವನ್ನು ಕಬ್ ಮಾಸ್ಟರ್ ಶ್ರೀಮತಿ ಅಮೃತಾ ವಿ ಶೆಟ್ಟಿ ನಿರ್ವಹಿಸಿ, ಕಬ್ ವಿದ್ಯಾರ್ಥಿ ವಿಹಾನ್ ಮಯ್ಯ ಸ್ವಾಗತಿಸಿ,ಕಬ್ ವಿದ್ಯಾರ್ಥಿ ಅಚಿಂತ್ಯ ಧನ್ಯವಾದವಿತ್ತರು.

Related posts

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿಶೇಷ ತರಗತಿಯ ಸಮಾರೋಪ ಕಾರ್ಯಕ್ರಮ

Suddi Udaya

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya

ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya
error: Content is protected !!