28 C
ಪುತ್ತೂರು, ಬೆಳ್ತಂಗಡಿ
August 5, 2026
ತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿ

ಮಡಿಕೇರಿಯ ಪ್ರಕೃತಿ ಮಡಿಲಲ್ಲಿ ಬೆಳ್ತಂಗಡಿ ಹೆರಾಜೆ ಕುಟುಂಬದ ಸಂಭ್ರಮದ ಕುಟುಂಬ ಮಿಲನ

ಬೆಳ್ತಂಗಡಿ: ಬೆಳ್ತಂಗಡಿಯ ಪ್ರತಿಷ್ಠಿತ ಹೆರಾಜೆ ಕುಟುಂಬದ ಸದಸ್ಯರು ಮಡಿಕೇರಿಯ ಸುಂದರ ಪರಿಸರದ ವಿಸ್ಮ ರೆಸಾರ್ಟ್ನಲ್ಲಿ ಕುಟುಂಬ ಮಿಲನ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಿದರು.

ಸುಮಾರು 70ಕ್ಕೂ ಹೆಚ್ಚು ಹಿರಿಯ-ಕಿರಿಯ ಸದಸ್ಯರು ಭಾಗವಹಿಸಿದ ಈ ಕುಟುಂಬ ಸಮಾಗಮದಲ್ಲಿ ಭಾಗವಹಿಸಿದರು.
ಆಷಾಢ ಮಾಸದ ಮಳೆಯ ನಡುವೆ ಪ್ರಕೃತಿಯ ಸೊಬಗನ್ನು ಸವಿಯುತ್ತಾ ಕುಟುಂಬ ಸದಸ್ಯರು ವಿವಿಧ ಮನರಂಜನಾ ಚಟುವಟಿಕೆಗಳು, ಆಟೋಟಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಉಲ್ಲಾಸದ ಕ್ಷಣಗಳನ್ನು ಕಳೆದರು.

ಕುಟುಂಬದ ಹಿರಿಯರಾದ ಪೀತಾಂಬರ ಹೆರಾಜೆ, ಶ್ರೀಮತಿ ಸಂಗೀತ, ಶ್ರೀಮತಿ ಲೋಲಾಕ್ಷಿ, ಶೇಖರ ಬಂಗೇರ,ಜಯರಾಮ ಬಂಗೇರ, ಶ್ರೀಮತಿ ಸುಜಾತಾ, ಕೇಶವ ಪೂಜಾರಿ, ಶ್ರೀಮತಿ ಜಾನಕಿ ಕೇಶವ್, ಶ್ರೀಮತಿ ವಿಮಲಾ ಜಗನ್ನಾಥ್, ಉಮೇಶ್ ಬಂಗೇರ, ಶ್ರೀಮತಿ ಸರಿತಾ ಉಮೇಶ್ ಹಾಗೂ ಶ್ರೀಮತಿ ಲತಾ ಶಿವರಾಮ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.

ಕುಟುಂಬದ ಸದಸ್ಯರು ಒಟ್ಟಾಗಿ ಸಮಯ ಕಳೆಯುವ ಮೂಲಕ ಹಳೆಯ ನೆನಪುಗಳನ್ನು ಮೆಲುಕು ಹಾಕಿ, ಹೊಸ ನೆನಪುಗಳನ್ನು ಸೃಷ್ಟಿಸಿಕೊಂಡರು. ಈ ಕುಟುಂಬ ಮಿಲನವು ಎಲ್ಲರಿಗೂ ಅವಿಸ್ಮರಣೀಯ ಅನುಭವವಾಗಿ ಮೂಡಿಬಂದಿತು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ‌ ಮನವಿ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya
error: Content is protected !!