ಬೆಳ್ತಂಗಡಿ: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರ ಕೇಂದ್ರ ಸಂಘ ಬೆಂಗಳೂರು (ರಿ) ಜಿಲ್ಲಾ ಶಾಖೆ ದಕ್ಷಿಣ ಕನ್ನಡ ಮಂಗಳೂರು ಇದರ ಜಿಲ್ಲಾ “ಪ್ರಧಾನ ಕಾರ್ಯದರ್ಶಿ” ಆಗಿ ವೆಂಕಟೇಶ್ ವೈ ಆಯ್ಕೆಗೊಂಡಿದ್ದಾರೆ.
ಪ್ರಸ್ತುತ ಇವರು ಪ್ರಾಥಮಿಕ ಆರೋಗ್ಯ ಕೇಂದ್ರ ಅಳದಂಗಡಿ ಬೆಳ್ತಂಗಡಿ ತಾಲೂಕು ಇಲ್ಲಿ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ . ಕರ್ನಾಟಕ ರಾಜ್ಯ ಸರಕಾರಿ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳ ಕೇಂದ್ರ ಸಂಘ ಬೆಂಗಳೂರು ಜಿಲ್ಲಾ ಶಾಖೆ ದಕ್ಷಿಣ ಕನ್ನಡ ಮಂಗಳೂರು ಇದರ ಪ್ರಸ್ತುತ ಅಧ್ಯಕ್ಷರಾಗಿದ್ದಾರೆ.













