28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತ್ ಸ್ಕೌಟ್ಸ್ & ಗೈಡ್ಸ್ ವತಿಯಿಂದ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

ಧರ್ಮಸ್ಥಳ : ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆಯನ್ನು ಆಚರಿಸಲಾಯಿತು.

ವಿಶ್ವ ಸ್ಕಾರ್ಫ್ ದಿನಾಚರಣೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಶ್ರೀಮತಿ ಪರಿಮಳ ಎಂ.ವಿ ಇವರಿಗೆ ಸ್ಕಾರ್ಫ್ ತೊಡಿಸಿ ಗೌರವ ವಂದನೆಯನ್ನು ಸಲ್ಲಿಸಲಾಯಿತು. ಶಾಲಾ ಕಬ್ ಮಾಸ್ಟರ್ ಶ್ರೀಮತಿ ಅಮೃತಾ ವಿ.ಶೆಟ್ಟಿ ಇವರು ಸ್ಕಾರ್ಫ್ ದಿನದ ಮಹತ್ವ ವಿವರಿಸಿದರು. ಬಳಿಕ ಬನ್ನಿ ವಿದ್ಯಾರ್ಥಿಗಳಿಗೆ ಏಪ್ರಾನ್ ತೊಡಿಸಿ, ಹೊಸದಾಗಿ ಸೇರ್ಪಡೆಗೊಂಡ ಕಬ್ ಬುಲ್ ಬುಲ್ ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳಿಗೆ ಸ್ಕಾರ್ಫ್ ತೊಡಿಸಿ ಸ್ವಾಗತಿಸಲಾಯಿತು.

ಕಬ್ ಮಾಸ್ಟರ್ ಶ್ರೀಮತಿ ಹೇಮಾವತಿ ಕಬ್ ಹಾಗೂ ಬುಲ್ ಬುಲ್ ಪ್ರತಿಜ್ಞೆ ಹಾಗೂ ನಿಯಮ ಹೇಳಿದರು.ಸ್ಕೌಟ್ ಮಾಸ್ಟರ್ ಶ್ರೀಮತಿ ಶಶಿಕಲಾ ಸ್ಕೌಟ್ ಪ್ರತಿಜ್ಞೆ ಅನ್ನು ಬೋಧಿಸಿದರು. ಗೈಡ್ ಕ್ಯಾಪ್ಟನ್ ಶ್ರೀಮತಿ ದೀಕ್ಷಾ ನಿಯಮ ಬೋಧಿಸಿದರು.ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರು ಮಾತನಾಡುತ್ತಾ ಸ್ಕಾರ್ಫ್ ಮಹತ್ವ ಉದ್ದೇಶ ,ಸಮವಸ್ತ್ರದ ಮಹತ್ವ ಹಾಗೂ ಅದನ್ನು ಧರಿಸುವವರ ಕೆಲಸ ಕಾರ್ಯಗಳು ಜವಾಬ್ದಾರಿ,ಅದನ್ನು ನಿಭಾಯಿಸಬೇಕಾದ ಅಗತ್ಯತೆ ಹಾಗೂ ನಿರ್ವಹಿಸುವ ರೀತಿ ಹೇಗಿರಬೇಕು ಎಂಬುದನ್ನು ವಿವರಿಸಿದರು. ಕಾರ್ಯಕ್ರಮವನ್ನು ಕಬ್ ಮಾಸ್ಟರ್ ಶ್ರೀಮತಿ ಅಮೃತಾ ವಿ ಶೆಟ್ಟಿ ನಿರ್ವಹಿಸಿ, ಕಬ್ ವಿದ್ಯಾರ್ಥಿ ವಿಹಾನ್ ಮಯ್ಯ ಸ್ವಾಗತಿಸಿ,ಕಬ್ ವಿದ್ಯಾರ್ಥಿ ಅಚಿಂತ್ಯ ಧನ್ಯವಾದವಿತ್ತರು.

Related posts

ಭಾರಿ ಗಾಳಿ ಮಳೆ: ಕನ್ಯಾಡಿ ಗ್ರಾಮದ ಪಾರ್ನಡ್ಕದಲ್ಲಿ ಹಾರಿ ಹೋದ ಮನೆಯ ಶೀಟು

Suddi Udaya

ರಾಷ್ಟ್ರೀಯ ಐಸ್ ಹಾಕಿ ಪದಕ ವಿಜೇತ ನಿಶ್ಕ್ ಹರೀಶ್ ಸಾಲ್ಯಾನ್‌ಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೇಣೂರು ಪೊಲೀಸರಿಂದ ಆರೋಪಿ ಬಂಧನ

Suddi Udaya

ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya

ಮಾಲಾಡಿ: ಕೊಲ್ಪದಬೈಲು ನಿವಾಸಿ ಚಂದ್ರಾವತಿ ನಿಧನ

Suddi Udaya
error: Content is protected !!