32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ‘ಆಟಿದ ಅಟಿಲ್’ ಕಾರ್ಯಕ್ರಮ

ಶಿರ್ಲಾಲು : ಶ್ರೀಗುರು ನಾರಾಯಣ ಸ್ವಾಮಿ ಸೇವಾ ಸಂಘ( ರಿ )ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಯುವ ವಾಹಿನಿ ಸಂಚಲನ ಸಮಿತಿ ಶಿರ್ಲಾಲು ಕರಂಬಾರು ಜಂಟಿ ಸಂಘಟನೆ ವತಿಯಿಂದ ಆಟಿದ ಅಟಿಲ್ ಕಾರ್ಯಕ್ರಮ ಶಿರ್ಲಾಲು ನವೋದಯ ಸಭಾಭವನದಲ್ಲಿ ನಡೆಯಿತು.

ಜಂಟಿ ಸಂಘಟನೆಯ ಅಧ್ಯಕ್ಷರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಎಂ. ಕೆ ಪ್ರಸಾದ್ ಮಾತನಾಡಿ ಆಟಿ ತಿಂಗಳ ಮಹತ್ವವನ್ನು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಇದರ ಅಧ್ಯಕ್ಷ ಸದಾಶಿವ ಪೂಜಾರಿ ಊರ ಇವರು ಮಾತನಾಡಿ ಸಂಘದ ಮುಂದಿನ ಸೇವಾ ಚಟುವಟಿಕೆಗಳ ಬಗ್ಗೆ ತಿಳಿಸಿ ಮುಂದೆ ನಡೆಯುವ ಎಲ್ಲಾ ಕಾರ್ಯಕ್ರಮಕ್ಕೆ ಸಹಕಾರವನ್ನು ಕೋರಿದರು.

ಮಹಿಳಾ ಬಿಲ್ಲವ ವೇದಿಕೆಯ ಸದಸ್ಯರು ಆಟಿ ತಿಂಗಳಲ್ಲಿ ಮಾಡುವ ಸುಮಾರು 26 ಬಗೆಯ ವಿವಿಧ ತಿಂಡಿ ತಿನಸುಗಳನ್ನು ತಯಾರಿಸಿದ್ದರು. ಕಾರ್ಯಕ್ರಮದಲ್ಲಿ ಮನರಂಜನೆಗೋಸ್ಕರ ಪ್ರವೀಣ್ ಕೋಟ್ಯಾನ್ ಪಾಲನೆ ವಿವಿಧ ಚುಟುಕು ಆಟೋಟ ಸ್ಪರ್ಧೆಗಳನ್ನು ನೆರವೇರಿಸಿದರು. ಸಭೆಯಲ್ಲಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಜ್ಞಾನೇಶ್ ಪೂಜಾರಿ ಕಟ್ಟ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷ ಶ್ರೀಮತಿ ಶೋಭಾ ಗೊಣಗುರಿ, ಯುವ ವಾಹಿನಿ ಸಂಚಲನ ಸಮಿತಿ ಅಧ್ಯಕ್ಷ ಯತೀಶ್ ಪೂಜಾರಿ ಉಪಸ್ಥಿತರಿದ್ದರು. ಕುಮಾರಿ ಸಿಂಚನ ಪೂಜಾರಿ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ರಂಜಿತ್ ಆಜೀರೋಲಿ ಸ್ವಾಗತಿಸಿ, ಹರೀಶ್ ಕಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಶೋಭಾ ಗೊಣಗುರಿ ಧನ್ಯವಾದವಿತ್ತರು.

Related posts

ಮಡಂತ್ಯಾರು ಮಂಡಲ ವತಿಯಿಂದ ಹಿಂದೂ ಸಂಗಮ; ಭವ್ಯ ಶೋಭಾಯಾತ್ರೆ

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!