24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ‘ಆಟಿದ ಅಟಿಲ್’ ಕಾರ್ಯಕ್ರಮ

ಶಿರ್ಲಾಲು : ಶ್ರೀಗುರು ನಾರಾಯಣ ಸ್ವಾಮಿ ಸೇವಾ ಸಂಘ( ರಿ )ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಯುವ ವಾಹಿನಿ ಸಂಚಲನ ಸಮಿತಿ ಶಿರ್ಲಾಲು ಕರಂಬಾರು ಜಂಟಿ ಸಂಘಟನೆ ವತಿಯಿಂದ ಆಟಿದ ಅಟಿಲ್ ಕಾರ್ಯಕ್ರಮ ಶಿರ್ಲಾಲು ನವೋದಯ ಸಭಾಭವನದಲ್ಲಿ ನಡೆಯಿತು.

ಜಂಟಿ ಸಂಘಟನೆಯ ಅಧ್ಯಕ್ಷರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಎಂ. ಕೆ ಪ್ರಸಾದ್ ಮಾತನಾಡಿ ಆಟಿ ತಿಂಗಳ ಮಹತ್ವವನ್ನು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಇದರ ಅಧ್ಯಕ್ಷ ಸದಾಶಿವ ಪೂಜಾರಿ ಊರ ಇವರು ಮಾತನಾಡಿ ಸಂಘದ ಮುಂದಿನ ಸೇವಾ ಚಟುವಟಿಕೆಗಳ ಬಗ್ಗೆ ತಿಳಿಸಿ ಮುಂದೆ ನಡೆಯುವ ಎಲ್ಲಾ ಕಾರ್ಯಕ್ರಮಕ್ಕೆ ಸಹಕಾರವನ್ನು ಕೋರಿದರು.

ಮಹಿಳಾ ಬಿಲ್ಲವ ವೇದಿಕೆಯ ಸದಸ್ಯರು ಆಟಿ ತಿಂಗಳಲ್ಲಿ ಮಾಡುವ ಸುಮಾರು 26 ಬಗೆಯ ವಿವಿಧ ತಿಂಡಿ ತಿನಸುಗಳನ್ನು ತಯಾರಿಸಿದ್ದರು. ಕಾರ್ಯಕ್ರಮದಲ್ಲಿ ಮನರಂಜನೆಗೋಸ್ಕರ ಪ್ರವೀಣ್ ಕೋಟ್ಯಾನ್ ಪಾಲನೆ ವಿವಿಧ ಚುಟುಕು ಆಟೋಟ ಸ್ಪರ್ಧೆಗಳನ್ನು ನೆರವೇರಿಸಿದರು. ಸಭೆಯಲ್ಲಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಜ್ಞಾನೇಶ್ ಪೂಜಾರಿ ಕಟ್ಟ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷ ಶ್ರೀಮತಿ ಶೋಭಾ ಗೊಣಗುರಿ, ಯುವ ವಾಹಿನಿ ಸಂಚಲನ ಸಮಿತಿ ಅಧ್ಯಕ್ಷ ಯತೀಶ್ ಪೂಜಾರಿ ಉಪಸ್ಥಿತರಿದ್ದರು. ಕುಮಾರಿ ಸಿಂಚನ ಪೂಜಾರಿ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ರಂಜಿತ್ ಆಜೀರೋಲಿ ಸ್ವಾಗತಿಸಿ, ಹರೀಶ್ ಕಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಶೋಭಾ ಗೊಣಗುರಿ ಧನ್ಯವಾದವಿತ್ತರು.

Related posts

ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಗುರು ಗಾಂಧಿ ಸಂವಾದ ಕಾರ್ಯಕ್ರಮ ಮತ್ತು ಕೋಟಿ ಚೆನ್ನಯ್ಯ ಕ್ರೀಡಾಕೂಟದ ಪೂರ್ವಭಾವಿ ಸಭೆ

Suddi Udaya

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ವಿದ್ಯಾಮಾತಾದ ವಿದ್ಯಾರ್ಥಿಗಳಿಬ್ಬರು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು

Suddi Udaya

ಪಡ್ಡಂದಡ್ಕ: ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠೆ-ಎ.5 ನೂತನ ಶಿಲಾಮಯ ಶ್ರೀ ನಾಗದೇವರ ಬಿಂಬಗಳ ಜಲಾಧಿವಾಸ

Suddi Udaya
error: Content is protected !!