ಮಡಂತ್ಯಾರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ವಸ್ತ್ರ ಮಳಿಗೆಯಾದ ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಆ. 5ರಂದು ಭೇಟಿ ನೀಡಿ, ಸಂಸ್ಥೆಯ ಕಾರ್ಯವೈಖರಿ ಹಾಗೂ ಗ್ರಾಹಕ ಸ್ನೇಹಿ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ನೂತನ್ ಕ್ಲೋತ್ ಸೆಂಟರ್ನ ಮಾಲಕರಾದ ರಾಜೇಶ್ ಹಾಗೂ ಪ್ರಕಾಶ್ ಅವರು ಸಚಿವರನ್ನು ಗೌರವಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಕಾಂಗ್ರೆಸ್ ಮುಖಂಡರಾದ ಪ್ರವೀಣ್ ಫೆರ್ನಾಂಡೀಸ್ ಹಳ್ಳಿಮನೆ, ಸಾಹುಲ್ ಹಮೀದ್ ಹಾಗೂ ನೂತನ್ ಕ್ಲೋತ್ ಸೆಂಟರ್ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.













