28.6 C
ಪುತ್ತೂರು, ಬೆಳ್ತಂಗಡಿ
September 19, 2026
ತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿ

ಮಡಿಕೇರಿಯ ಪ್ರಕೃತಿ ಮಡಿಲಲ್ಲಿ ಬೆಳ್ತಂಗಡಿ ಹೆರಾಜೆ ಕುಟುಂಬದ ಸಂಭ್ರಮದ ಕುಟುಂಬ ಮಿಲನ

ಬೆಳ್ತಂಗಡಿ: ಬೆಳ್ತಂಗಡಿಯ ಪ್ರತಿಷ್ಠಿತ ಹೆರಾಜೆ ಕುಟುಂಬದ ಸದಸ್ಯರು ಮಡಿಕೇರಿಯ ಸುಂದರ ಪರಿಸರದ ವಿಸ್ಮ ರೆಸಾರ್ಟ್ನಲ್ಲಿ ಕುಟುಂಬ ಮಿಲನ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಿದರು.

ಸುಮಾರು 70ಕ್ಕೂ ಹೆಚ್ಚು ಹಿರಿಯ-ಕಿರಿಯ ಸದಸ್ಯರು ಭಾಗವಹಿಸಿದ ಈ ಕುಟುಂಬ ಸಮಾಗಮದಲ್ಲಿ ಭಾಗವಹಿಸಿದರು.
ಆಷಾಢ ಮಾಸದ ಮಳೆಯ ನಡುವೆ ಪ್ರಕೃತಿಯ ಸೊಬಗನ್ನು ಸವಿಯುತ್ತಾ ಕುಟುಂಬ ಸದಸ್ಯರು ವಿವಿಧ ಮನರಂಜನಾ ಚಟುವಟಿಕೆಗಳು, ಆಟೋಟಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಉಲ್ಲಾಸದ ಕ್ಷಣಗಳನ್ನು ಕಳೆದರು.

ಕುಟುಂಬದ ಹಿರಿಯರಾದ ಪೀತಾಂಬರ ಹೆರಾಜೆ, ಶ್ರೀಮತಿ ಸಂಗೀತ, ಶ್ರೀಮತಿ ಲೋಲಾಕ್ಷಿ, ಶೇಖರ ಬಂಗೇರ,ಜಯರಾಮ ಬಂಗೇರ, ಶ್ರೀಮತಿ ಸುಜಾತಾ, ಕೇಶವ ಪೂಜಾರಿ, ಶ್ರೀಮತಿ ಜಾನಕಿ ಕೇಶವ್, ಶ್ರೀಮತಿ ವಿಮಲಾ ಜಗನ್ನಾಥ್, ಉಮೇಶ್ ಬಂಗೇರ, ಶ್ರೀಮತಿ ಸರಿತಾ ಉಮೇಶ್ ಹಾಗೂ ಶ್ರೀಮತಿ ಲತಾ ಶಿವರಾಮ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.

ಕುಟುಂಬದ ಸದಸ್ಯರು ಒಟ್ಟಾಗಿ ಸಮಯ ಕಳೆಯುವ ಮೂಲಕ ಹಳೆಯ ನೆನಪುಗಳನ್ನು ಮೆಲುಕು ಹಾಕಿ, ಹೊಸ ನೆನಪುಗಳನ್ನು ಸೃಷ್ಟಿಸಿಕೊಂಡರು. ಈ ಕುಟುಂಬ ಮಿಲನವು ಎಲ್ಲರಿಗೂ ಅವಿಸ್ಮರಣೀಯ ಅನುಭವವಾಗಿ ಮೂಡಿಬಂದಿತು.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ರಂಜಿತ್ ಹೆಚ್ ಡಿ ಬಳಂಜ

Suddi Udaya

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

Suddi Udaya

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya
error: Content is protected !!