24 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಕಾಪು ಕಿಂಡಿ ಅಣೆಕಟ್ಟಿನ ಸಮೀಪದ ರಸ್ತೆ ಬದಿಯಲ್ಲಿ ಭಾರಿ ಪ್ರಮಾಣದ ತ್ಯಾಜ್ಯವನ್ನು ತಂದು ಸುರಿದಿರುವ ಘಟನೆ ಬೆಳಕಿಗೆ ಬಂದಿದೆ.

ಗೋಣಿಚೀಲಗಳಲ್ಲಿ ತುಂಬಿಸಿ ತಂದ ತ್ಯಾಜ್ಯವನ್ನು ರಸ್ತೆ ಬದಿಗೆ ಎಸೆದಿರುವುದರಿಂದ ಪರಿಸರ ಮಾಲಿನ್ಯದ ಜತೆಗೆ ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಈ ತ್ಯಾಜ್ಯ ಮಳೆ ನೀರಿನೊಂದಿಗೆ ಕೊಚ್ಚಿಕೊಂಡು ಸಮೀಪದಲ್ಲೇ ಹರಿಯುವ ಮೃತ್ಯುಂಜಯ ನದಿಗೆ ಸೇರುವ ಸಾಧ್ಯತೆ ಇದೆ.ಈ ಪ್ರದೇಶದಲ್ಲಿ ಈ ಹಿಂದೆ ತ್ಯಾಜ್ಯ ಸುರಿಯುವುದನ್ನು ತಡೆಯುವ ಉದ್ದೇಶದಿಂದ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾ ಸದ್ಯ ಕಣ್ಮರೆಯಾಗಿರುವುದು ಕಸ ಎಸೆಯುವವರಿಗೆ ಅನುಕೂಲ ಕಲ್ಪಿಸಿದೆ.

Related posts

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ

Suddi Udaya

ಭಟ್ಕಳ ತಲಗೋಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಕನ್ಯಾಡಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಶಿಲಾನ್ಯಾಸ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಪದಗ್ರಹಣ

Suddi Udaya
error: Content is protected !!