24 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ರಾಜ್ಯ ಪಠ್ಯಕ್ರಮ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ಸಾಧನೆ

ಉಜಿರೆ; 2025-26 ನೇ ಸಾಲಿನ ರಾಷ್ಟ್ರ ಮಟ್ಟದ ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಉಜಿರೆ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ಆರನೇ ತರಗತಿಯ ಶಶಿಧರ್ ಹಾಗೂ ಸನ್ನಿಧಿ ಜಿ ಕುಲಾಲ್ ಏಳನೇ ತರಗತಿಯ ಕೃಷ್ಣತೇಜ ಮತ್ತು ಉತ್ತಮ್ ಎಂ ಕೆ., 9ನೇ ತರಗತಿಯ ಅನುಶ್ರೀ ಹೊಳ್ಳ 10ನೇ ತರಗತಿಯ ಸ್ಪೂರ್ತಿ ಎಸ್. ಸೇರಿದಂತೆ ಒಟ್ಟು ಆರು ವಿದ್ಯಾರ್ಥಿಗಳು ಬೆಂಗಳೂರಿನ ಮಹದೇವ ದೇಸಾಯಿ ಸಭಾಂಗಣ ಗಾಂಧಿ ಭವನದಲ್ಲಿ ರಾಷ್ಟ್ರಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ. ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯ ಸಂಯೋಜಕರಾದ ಶಿಕ್ಷಕಿ ರೇಷ್ಮಾ ಇವರನ್ನು ಸನ್ಮಾನಿಸಲಾಯಿತು. ಈ 10ನೇ ವರ್ಷದ ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯ ಘಟಿಕೋತ್ಸವದಲ್ಲಿ ಪದ್ಮಶ್ರೀ ಪುರಸ್ಕೃತ ಡಾಕ್ಟರ್ ಎಸ್ ಜೆ ಸುಶೀಲಮ್ಮ ಹಾಗೂ ಪ್ರೊ. ಶೋಭಾ ಜಿ ನಿರ್ದೇಶಕರು ಕಾಲೇಜ್ ಶಿಕ್ಷಣ ಇಲಾಖೆ ಬೆಂಗಳೂರು. ನಾಡೋಜ ಡಾ. ವೂಡೇ ಪಿ .ಕೃಷ್ಣ ಅಧ್ಯಕ್ಷರು ಕರ್ನಾಟಕ ಗಾಂಧಿ ಸ್ಮಾರಕ ನಿಧಿ , ಗಿರೀಶ್ ಕುಲಕರ್ಣಿ ಪರೀಕ್ಷಾ ನಿಯಂತ್ರಣ ಅಧಿಕಾರಿ ಜಲಗಾಂ ಮಹಾರಾಷ್ಟ್ ಮತ್ತು ಡಾ. ಅಭಿದ ಬೇಗಂ ರಾಜ್ಯ ಸಂಯೋಜಕರು ಗಾಂಧೀ ವಿಚಾರ ಸಂಸ್ಕರಣ ಪರೀಕ್ಷೆ ಬೆಂಗಳೂರು ಇವರು ಭಾಗಿಗಳಾಗಿದ್ದರು.

ವಿದ್ಯಾರ್ಥಿಗಳನ್ನು ಹಾಗೂ ಶಾಲಾ ಶಿಕ್ಷಕಿಯನ್ನು ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ವಿದ್ಯಾ ಲಕ್ಷ್ಮಿ ಯವರು ಅಭಿನಂದಿಸಿದರು.

Related posts

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ವೃತ್ತಿಯೊಂದಿಗಿನ ಜೀವನದ ಸುಮತೋಲನ” ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಲಾಯಿಲ: ಬೈಕ್ ಸ್ಕಿಡ್ ಆಗಿ ಬಿದ್ದು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

Suddi Udaya
error: Content is protected !!