ಬೆಳ್ತಂಗಡಿ: ಅತ್ಯಂತ ನಾದುರಸ್ತಿಯಲ್ಲಿರುವ ಲಾಯಿಲ ಗ್ರಾಮದ ಪಡ್ಲಾಡಿ ಡಾ.ಬಿ.ಆರ್ ಅಂಬೇಡ್ಕರ್ ಭವನವನ್ನು ದುರಸ್ತಿ ಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳ ತಂಡ ಆ.5ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇತ್ತೀಚೆಗೆ ಲಾಯಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ/ಪಂಗಡಗಳ ವಿಶೇಷ ಗ್ರಾಮಸಭೆಯಲ್ಲಿ ಪಡ್ಲಾಡಿ ಅಂಬೇಡ್ಕರ್ ಭವನದ ದುರಸ್ತಿ ಬಗ್ಗೆ ಗಂಭೀರ ಚರ್ಚೆ ನಡೆಯಿತು. ಲಾಯಿಲ ಗ್ರಾಮದ ಏಕೈಕ ಅಂಬೇಡ್ಕರ್ ಭವನವನ್ನು ತಕ್ಷಣ ದುರಸ್ತಿಗೊಳಿಸುವಂತೆ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡವು ಭೇಟಿ ನೀಡಿ ಪರಿಶೀಲನೆ ನಡೆಸಿತು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಧೀರಜ್ ಕುಮಾರ್ , ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಇಂಜಿನಿಯರ್ ಹರೀಶ್ ಕಾರಿಂಜ , ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ್ , ಸಹಾಯಕ ಲೆಕ್ಕಾಧಿಕಾರಿ ಸುಪ್ರೀತಾ ಶೆಟ್ಟಿ , ಮಾಜಿ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ, ಅಂಬೇಡ್ಕರ್ ಭವನ ಉಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ ನೆನಪು , ಸ್ಥಳೀಯ ದಲಿತ ಮುಖಂಡರಾದ ಸುಮನ್ ಪಡ್ಲಾಡಿ , ಸುರೇಂದ್ರ ಪಡ್ಲಾಡಿ ಉಪಸ್ಥಿತರಿದ್ದರು.













