ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಬೆಳೆ ವಿಮೆ ಪ್ರೀಮಿಯಂ ಪಾವತಿಸುವ ಅವಧಿಯನ್ನು ಸರ್ಕಾರ ಆಗಸ್ಟ್ 17ರವರೆಗೆ ವಿಸ್ತರಿಸಿದೆ.
ಈ ಹಿಂದೆ ಜುಲೈ 31ರವರೆಗೆ ಮಾತ್ರ ಪ್ರೀಮಿಯಂ ಪಾವತಿಸಲು ಅವಕಾಶ ನೀಡಲಾಗಿತ್ತು. ಆದರೆ ಹೆಚ್ಚಿನ ಸಂಖ್ಯೆಯ ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ.













