ಉಜಿರೆ : ‘ಪರಿಸರವನ್ನು ಹಸಿರಾಗಿ ಉಳಿಸುವ ಉದ್ದೇಶದಿಂದ ಪರಿಸರ ಮಾತೆಯ ರಕ್ಷಣೆಯ ಕುರಿತು ತಾಯಂದಿರು ಕಾಳಜಿ ಹಾಗೂ ಜಾಗೃತಿ ಮೂಡಿಸಿ ತಮ್ಮ ಮಕ್ಕಳಿಗೆ ಪರಿಸರ ಉಳಿಸಲು ದಾರಿದೀಪವಾಗುವಂತಹ ಕೇಂದ್ರ ಸರಕಾರದ ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಯಾದ, ‘ಏಕ್ ಪೇಡ್ ಮಾ ಕೇ ನಾಮ್’ ಸಲುವಾಗಿ ಎಸ್.ಡಿ.ಎಂ. ವಸತಿ ಪದವಿ ಪೂರ್ವ ಕಾಲೇಜಿನ ಇಕೋ ಕ್ಲಬ್ ನ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾಲೇಜಿಗೆ ಸರ್ವ ರೀತಿಯಲ್ಲೂ ಮಾರ್ಗದರ್ಶಕರಾಗಿರುವ ನಿನಾದದ ಶ್ರೀಮತಿ ಸೋನಿಯಾ ಯಶೋವರ್ಮರವರು ಗಿಡ ನೆಟ್ಟು ಪರಿಸರ ಕಾಳಜಿ ಬಗ್ಗೆ ತಿಳಿ ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ವಿದ್ಯಾರ್ಥಿಗಳ ಜೊತೆ ಸೇರಿ ಗಿಡ ನೆಟ್ಟು, ಮಾಹಿತಿ ನೀಡಿದರು.
ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಉತ್ತಮ ತಳಿಯ ಗಿಡಗಳನ್ನು, ನೆಟ್ಟು ಬೆಳೆಸುವಂತೆ, ಉಪನ್ಯಾಸಕರಿಗೆ ಹಸ್ತಾಂತರಿಸಲಾಯಿತು.
ಇಕೋ ಕ್ಲಬ್ ನ ಸಂಯೋಜಕಿ ಹಾಗೂ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ವಾಣಿ ಎಂ. ಎ. ಕಾರ್ಯಕ್ರಮ ನಿರ್ವಹಿಸಿದರು.













