26.4 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಧರ್ಮಸ್ಥಳ: ಬಂಟ್ವಾಳದ ಎಸ್‌ವಿ‌ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಧರ್ಮಸ್ಥಳದ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಗಮನಾರ್ಹ ಸಾಧನೆ ಮಾಡಿದ್ದಾರೆ.

ಶಾಲೆಯ 10ನೇ ತರಗತಿಯ ಕುಮಾರಿ ಆದ್ಯ ರೈ, ಕುಮಾರಿ ದೃಷಾ ಮರಿಯಾ ಹಾಗೂ 9ನೇ ತರಗತಿಯ ಕುಮಾರಿ ಶ್ರಾವಣಿ ಅವರನ್ನು ಒಳಗೊಂಡ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ಸಾಧನೆಯೊಂದಿಗೆ ಕುಮಾರಿ ಆದ್ಯ ರೈ ಹಾಗೂ ಕುಮಾರಿ ದೃಷಾ ಮರಿಯಾ ಅವರು ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ಅವರು ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿನಿಯರ ಸಾಧನೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಅವರು ಶ್ಲಾಘಿಸಿ, ವಿದ್ಯಾರ್ಥಿನಿಯರು ಹಾಗೂ ತರಬೇತುದಾರ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಇನ್ನಷ್ಟು ಯಶಸ್ಸು ಗಳಿಸುವಂತೆ ಶುಭ ಹಾರೈಸಿದರು

Related posts

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!