ಬೆಳ್ತಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸುವರ್ಣ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸುವ ಕುರಿತು ಸಮಾಲೋಚನಾ ಸಭೆಯು ಆಗಸ್ಟ್ 9ರಂದು ಪೂರ್ವಾಹ್ನ 10.00 ಗಂಟೆಗೆ ಕೆದ್ದು, ಮಿತ್ತರೋಡಿಯ ಶ್ರೀ ದೀಪಾ ಸಭಾಭವನದಲ್ಲಿ ನಡೆಯಲಿದೆ.
ಸುವರ್ಣ ಮಹೋತ್ಸವದ ಕಾರ್ಯಕ್ರಮಗಳ ರೂಪುರೇಷೆ, ವಿವಿಧ ಸಮಿತಿಗಳ ರಚನೆ ಹಾಗೂ ಆಚರಣೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಸಂಘದ ನಿರ್ದೇಶಕರು, ಸದಸ್ಯರು ಹಾಗೂ ಆಹ್ವಾನಿತರು ಸಭೆಯಲ್ಲಿ ಭಾಗವಹಿಸುವಂತೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













