24.2 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಸಾಹಿತ್ಯ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

ಉಜಿರೆ: ಮಂಗಳೂರಿನ ಕೆನರ ಪ್ರೌಢಶಾಲೆಯಲ್ಲಿ “ಕಾನ್ ಮಂಥನ 2026” ಎಂಬ ಶೀರ್ಷಿಕೆಯಲ್ಲಿ ನಡೆದ ಐಕ್ಸ್ (Association of ICSE and CBSE Schools) ಅಂತರ ಶಾಲಾ ಜಿಲ್ಲಾ ಮಟ್ಟದ ಸಾಹಿತ್ಯ ಸ್ಪರ್ಧೆಯಲ್ಲಿ ಉಜಿರೆಯ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.

ಹಿರಿಯ ಪ್ರಾಥಮಿಕ ವಿಭಾಗದಲ್ಲಿ ನಡೆದ ಕನ್ನಡ ನಿರೂಪಣಾ ಚತುರ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರಾದ ಅನ್ವಿ ಮತ್ತು ಶಾರ್ವಿ ರೈ ಪ್ರಥಮ ಸ್ಥಾನ ಪಡೆದರು.

ಪ್ರೌಢಶಾಲಾ ವಿಭಾಗದಲ್ಲಿ ನಡೆದ “ಸುಳಿವು ಕಂಡುಹಿಡಿಯಿರಿ” ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಪೃಥ್ವಿ ಎಸ್. ಶೆಟ್ಟಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕ ವೃಂದವು ಅಭಿನಂದಿಸಿ, ಮುಂದಿನ ಸ್ಪರ್ಧೆಗಳಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

Related posts

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಭೇಟಿ

Suddi Udaya

ಶಾಸಕ ಹರೀಶ್ ಪೂಂಜರಿಗೆ ವಿಚಾರಣೆಗೆ ಬರಲು ಪೊಲೀಸರು ನೋಟಿಸು ನೀಡಿಲ್ಲ: ಶಾಸಕರಿಗೆ ಗೃಹ ಬಂಧನದಂತೆ ಪೊಲೀಸರು ಮಾಡಿದ್ದಾರೆ

Suddi Udaya
error: Content is protected !!