24.2 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪರಿಸರ ಸೂಕ್ಷ್ಮ ಪ್ರದೇಶವನ್ನು ನಿಗದಿಪಡಿಸಿ ಕರಡು ಅಧಿಸೂಚನೆ : ರಾಜ್ಯ ಸರ್ಕಾರವು ಭೌತಿಕ ಸಮೀಕ್ಷೆ ನಡೆಸಿ ಜನವಸತಿ ಪ್ರದೇಶ ವಿರಹಿತಗೊಳಿಸಿ ಜನರ ಆತಂಕವನ್ನು ನಿವಾರಿಸಬೇಕು : ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

ಬೆಳ್ತಂಗಡಿ: ಕೇಂದ್ರ ಸರ್ಕಾರವು ಪರಿಸರ ಸೂಕ್ಷ್ಮ ವಲಯವನ್ನು ನಿಗದಿಪಡಿಸಿ ಏಳನೇ ಬಾರಿಗೆ ಕರಡು ಅಧಿಸೂಚನೆ ಪ್ರಕಟಿಸಿದ್ದು ಪಶ್ಚಿಮಘಟ್ಟದ ಗ್ರಾಮಗಳ ರೈತರು, ಬುಡಕಟ್ಟು ಜನಾಂಗಗಳು, ಸಾರ್ವಜನಿಕರಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣ ಆಗಿದೆ.

ಈ ಹಿಂದೆ 2024ರಲ್ಲಿ ಪ್ರಕಟ ಆಗಿದ್ದ ಕರಡು ಅಧಿಸೂಚನೆಯಲ್ಲಿ ಬಹುತೇಕ ಅಂಶಗಳೇ ಈ ಬಾರಿಯ ಕರಡಿನಲ್ಲೂ ಇವೆ. ಆದುದರಿಂದ ರಾಜ್ಯ ಸರ್ಕಾರವು ಜನರ ಆತಂಕ ನಿವಾರಿಸುವ ಉದ್ದೇಶದಿಂದ ಭೌತಿಕ ಸರ್ವೇಯನ್ನು ನಡೆಸಿ ಜನವಸತಿ ಪ್ರದೇಶಗಳನ್ನು ವಿರಹಿತಗೊಳಿಸಿ ಕೃಷಿ, ತೋಟಗಾರಿಕೆ ಚಟುವಟಿಕೆಗಳು, ಜೀವನೋಪಾಯ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಯೋಜನೆಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಹಾಗೂ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಬೇಕು.

ಕರಡು ಅಧಿಸೂಚನೆ ನಿಗದಿಪಡಿಸಿದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮ ಸಭೆಗಳನ್ನು ನಡೆಸಿ ಕೂಡಲೇ ಆಕ್ಷೇಪಣೆ ಸಲ್ಲಿಸಲು ಗ್ರಾಮಸ್ಥರಿಗೆ ಅವಕಾಶ ನೀಡಬೇಕೆಂದು ರಾಜ್ಯ ಸರ್ಕಾರವನ್ನು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಒತ್ತಾಯಿಸಿದ್ದಾರೆ.

Related posts

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya

ಸೆ.1: ಬಿಜೆಪಿಯಿಂದ ಧರ್ಮಸ್ಥಳ ಚಲೋ-ಬೃಹತ್ ಸಮಾವೇಶ ಕೇಂದ್ರ, ರಾಜ್ಯ ಪ್ರಮುಖರು ಭಾಗಿ-ಲಕ್ಷಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಪತ್ರಿಕಾಗೋಷ್ಠಿಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾಹಿತಿ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

Suddi Udaya

ಮಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!