24.2 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ‘ಹೊಸಬೆಳಕು’ ಒಕ್ಕೂಟದ ಉದ್ಘಾಟನೆ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್‌ನ ವಾರ್ಷಿಕ ಹಬ್ಬದ ಅಂಗವಾಗಿ “ಹೊಸಬೆಳಕು ಒಕ್ಕೂಟ”ದ ಉದ್ಘಾಟನಾ ಸಮಾರಂಭವು ಆ.6ರಂದು ಭಕ್ತಿಭಾವ ಹಾಗೂ ಸಂಭ್ರಮದಿಂದ ನೆರವೇರಿತು.

ಪವಿತ್ರ ಬಲಿಪೂಜೆಯ ಬಳಿಕ ಧರ್ಮಗುರುಗಳಾದ ವಂದನೀಯ ಫಾ. ವಾಲ್ಟರ್ ಡಿಮೆಲ್ಲೊ ಅವರ ಅಧ್ಯಕ್ಷತೆಯಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಒಕ್ಕೂಟಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಹಾಗೂ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಫಾ. ವಾಲ್ಟರ್ ಡಿಮೆಲ್ಲೊ ಅವರು, “ಹೊಸಬೆಳಕು ಒಕ್ಕೂಟವು ಕ್ರೈಸ್ತ ಮೌಲ್ಯಗಳನ್ನು ಆಧಾರವಾಗಿಟ್ಟುಕೊಂಡು ಸಮಾಜಸೇವೆ, ಕುಟುಂಬಗಳ ಸಬಲೀಕರಣ, ಯುವಜನರ ನಾಯಕತ್ವ ವಿಕಾಸ ಹಾಗೂ ಪರಸ್ಪರ ಸಹಕಾರದ ಮನೋಭಾವವನ್ನು ಬೆಳೆಸುವ ಮೂಲಕ ಸಮಾಜಕ್ಕೆ ಮಾದರಿಯಾಗಲಿ” ಎಂದು ಶುಭ ಹಾರೈಸಿದರು.

ಆಗಸ್ಟ್ 6ರಂದು ಹೋಲಿ ರಿಡೀಮರ್ ಚರ್ಚ್‌ನ ವಾರ್ಷಿಕ ಹಬ್ಬದ ದಿನದಂದು ಉದ್ಘಾಟನೆಗೊಂಡ ಈ ಒಕ್ಕೂಟವು ಚರ್ಚ್ ಹಾಗೂ ಸಮಾಜದ ಅಭಿವೃದ್ಧಿಗೆ ಪೂರಕವಾದ ವಿವಿಧ ಸೇವಾ ಚಟುವಟಿಕೆಗಳನ್ನು ಕೈಗೊಳ್ಳುವ ಉದ್ದೇಶ ಹೊಂದಿದೆ.
ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಪರಿಚಯಿಸಲಾಯಿತು.
ಹೊಸಬೆಳಕು ಒಕ್ಕೂಟದ ಪದಾಧಿಕಾರಿಗಳ ಗೌರವಾಧ್ಯಕ್ಷರಾಗಿ ವಂದನೀಯ ಫಾ. ವಾಲ್ಟರ್ ಡಿಮೆಲ್ಲೊ, ಅಧ್ಯಕ್ಷರಾಗಿ ವಿನ್ಸೆಂಟ್ ಲೋಬೊ, ಉಪಾಧ್ಯಕ್ಷರಾಗಿ ರೊನಾಲ್ಡ್ ಡಿಸೋಜ, ಕಾರ್ಯದರ್ಶಿಯಾಗಿ ಪೌಲಿನ್ ರೇಗೊ, ಉಪಕಾರ್ಯದರ್ಶಿಯಾಗಿ ಫ್ಲೇವಿ ಪಾವ್ಲ್, ಕೋಶಾಧಿಕಾರಿಯಾಗಿ ರೊನಾಲ್ಡ್ ಲೋಬೊ, ಉಪಕೋಶಾಧಿಕಾರಿಯಾಗಿ ಗ್ರೇಸ್ ಲೋಬೊ ಆಯ್ಕೆಯಾದರು.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಉಪನ್ಯಾಸ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!