24.2 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಂಧೂರ ಶೆಟ್ಟಿ ರಚಿಸಿದ ಸ್ಕ್ರಿಬಲ್ ಆರ್ಟ್ ಇಂಡಿಯಾ ಬುಕ್ ಆಪ್ ರೆಕಾರ್ಡ್‌ಗೆ ಸೇರ್ಪಡೆ

ಬೆಳ್ತಂಗಡಿ: ಸಿಂಧೂರ ಶೆಟ್ಟಿ ಇವರು ಚಾರ್ಟ್ ಪೇಪರ್ ಮೇಲೆ ಕಪ್ಪು ಮಾರ್ಕರ್ ಪೆನ್ ಬಳಸಿ, ಸ್ಕ್ರಿಬಲ್ ಆರ್ಟ್ (ಅಸ್ತವ್ಯಸ್ತ ವೃತ್ತಾಕಾರದ ಮಾದರಿ) ತಂತ್ರದ ಮೂಲಕ ಚಾರ್ಲಿ ಚಾಪ್ಲಿನ್ ಅವರ ಕಪ್ಪು-ಬಿಳಿ ಸ್ಟೆನ್ಸಿಲ್ ಕಲಾಕೃತಿಯನ್ನು ರಚಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ (IBR Achiever) ಬಿರುದಿಗೆ ಪಾತ್ರರಾಗಿದ್ದಾರೆ.


ಈ ಸಾಧನೆಯನ್ನು ಅವರು 18 ವರ್ಷ 1 ತಿಂಗಳ ವಯಸ್ಸಿನಲ್ಲಿ ಸಾಧಿಸಿದ್ದು, 9-7-2026 ರಂದು ಈ ದಾಖಲೆಯನ್ನು ಅಧಿಕೃತವಾಗಿ ದೃಢೀಕರಿಸಲಾಗಿದೆ.

ನಡ ಗ್ರಾಮದ ಕೆಲ್ತಾಜೆ ಸಾಯಿ ಪ್ರಸಾದ ಮನೆ ನಿವಾಸಿ ಕೃಷ್ಣ ಶೆಟ್ಟಿ ಮತ್ತು ಶ್ರೀಮತಿ ಭಾರತಿ ಶೆಟ್ಟಿ ದಂಪತಿಗಳ ಪುತ್ರಿಯಾಗಿರುವ ಇವರು ಹೈಸ್ಕೂಲ್ ವಿದ್ಯಾಭ್ಯಾಸವನ್ನು ನಡ ಸರಕಾರಿ ಶಾಲೆಯಲ್ಲಿ ಮತ್ತು ಪಿ.ಯು.ಸಿ ಯನ್ನು ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜು ಉಜಿರೆಯಲ್ಲಿ ಪೂರೈಸಿದ್ದು, ಪ್ರಸ್ತುತ ಸಂತ ಫಿಲೋಮಿನ ಕಾಲೇಜು ಪುತ್ತೂರು ಇಲ್ಲಿ ಪ್ರಥಮ ವರ್ಷದ BCA AI & ML ವ್ಯಾಸಾಂಗ ಮಾಡುತ್ತಿದ್ದಾರೆ.

ಇವರು ಈ ಹಿಂದೆಯೂ 46 A4 ಶೀಟ್‌ಗಳನ್ನು ಬಳಸಿ ಸರೋಜಿನಿ ನಾಯ್ಡು ಅವರ ಟೈಪೋಗ್ರಾಫಿಕ್ ಆರ್ಟನ್ನು ಅವರ ಕವನಗಳನ್ನು ಬಳಸಿ ಮಾಡಿ ಗಮನ ಸೆಳೆದಿದ್ದರು. ಶಾಲಾ ದಿನಗಳಲ್ಲಿಯೂ ತನ್ನ ಅದ್ಬುತ ಪ್ರತಿಭೆಯ ಮೂಲಕ ಹಲವು ಪ್ರಶಸ್ತಿಗಳನ್ನು ಪಡೆದಿದ್ದು, ಇನ್ನಷ್ಟು ಸಾಧನೆಗಳನ್ನು ಮಾಡುವ ಕನಸನ್ನು ಹೊಂದಿದ್ದಾರೆ.

Related posts

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಡ್ರಗ್ ಡಿಸ್ಕವರಿ ಮತ್ತು ಪ್ರಿಸಿಷನ್ ಮೆಡಿಸಿನ್‌ನಲ್ಲಿ ಎ.ಐ ಪಾತ್ರ ಕುರಿತು ಉಪನ್ಯಾಸ

Suddi Udaya
error: Content is protected !!