ಕೊಕ್ಕಡ: ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣ ಶೆಟ್ಟಿ ಕಡಬ, ರವರಿಗೆ ಆ.08 ರಂದು ಅಭಿನಂದನಾ ಕಾರ್ಯಕ್ರಮ ಕೊಕ್ಕಡ ಸಮೀಪದ ಸೌತಡ್ಕ ಸೇವಾಧಾಮದಲ್ಲಿ ಸಂಜೆ 3 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಸಂಸ್ಥಾಪಕರು ಕಲ್ಲಡ್ಕ ಡಾ| ಪ್ರಭಾಕರ್ ಭಟ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜಾ, ಸಕಲೇಶಪುರ ಶಾಸಕ ಎಸ್. ಮಂಜುನಾಥ್ (ಸಿಮೆಂಟ್ ಮಂಜು) , ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ವಲಯಾಧ್ಯಕ್ಷ ಲ| ದೇವದಾಸ್ ಶೆಟ್ಟಿ ಹಿಬರೋಡಿ ಭಾಗವಹಿಸಲಿದ್ದಾರೆ.













