ಬೆಳ್ತಂಗಡಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿಯಲ್ಲಿ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ನಮ್ಮ ಭೂಮಿ- ನಮ್ಮ ಜಲ – ನಮ್ಮ ಶಕ್ತಿ ಎಂಬ ವಿಷಯದಡಿ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯ 9ನೇ ತರಗತಿ ವಿದ್ಯಾರ್ಥಿ ಆಯುಷ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ಅಭಿನಂದಿಸಿದ್ದರು. ಚಿತ್ರಕಲಾ ಶಿಕ್ಷಕರಾದ ಶ್ರೀರಾಮ್ ತರಬೇತಿ ನೀಡಿರುತ್ತಾರೆ.













