August 8, 2026
ಗ್ರಾಮಾಂತರ ಸುದ್ದಿ

ಆಶಾ ಯಂಗ್ ಸ್ಟಾರ್ ಕ್ಲಬ್ ಕಾರ್ಯಕಾರಿ ಸಮಿತಿ ಸಭೆ

ಬೆಳ್ತಂಗಡಿ, ಆ. 8: ಆಶಾ ಯಂಗ್ ಸ್ಟಾರ್ ಕ್ಲಬ್ (ರಿ.) ಕಾರ್ಯಕಾರಿ ಸಮಿತಿ ಸಭೆ ಅಧ್ಯಕ್ಷ ಶ್ರೀ ಜಯರಾಮ್ ಬಂಗೇರ ಅವರ ಅಧ್ಯಕ್ಷತೆಯಲ್ಲಿ. ಆ . 8ರಂದು ಆಶಾ ಯಂಗ್ ಸ್ಟಾರ್ ಕ್ಲಬ್ ನಲ್ಲಿನಡೆಯಿತು.

ಸಭೆಯಲ್ಲಿ ಕ್ಲಬ್ಬಿನ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಮುಂದಿನ ಮಹಾಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡುವುದರೊಂದಿಗೆ ಹೆಚ್ಚಿನ ಸದಸ್ಯರನ್ನು ಸಂಘಟನೆಯೊಂದಿಗೆ ಸೇರಿಸಿಕೊಳ್ಳಲು ನಿರ್ಧರಿಸಲಾಯಿತು

.

ಮಳೆಗಾಲ ಮುಗಿದ ಬಳಿಕ ಕ್ಲಬ್ಬಿನ ಕಟ್ಟಡದ ಮುಂಭಾಗದಲ್ಲಿ “ಆಶಾ ಯಂಗ್ ಸ್ಟಾರ್ ಕ್ಲಬ್ (ರಿ.)” ಎಂಬ ಹೆಸರನ್ನು ಅಳವಡಿಸಲು ಹಾಗೂ ಕ್ಲಬ್ಬಿನ ನೋಂದಣಿ ಪ್ರಕ್ರಿಯೆಯನ್ನು ಕಾರ್ಯದರ್ಶಿ ಶ್ರೀ ವಿಶ್ವನಾಥ ಶೆಟ್ರು ಅವರು ಯುವಜನ ಸೇವಾ ಇಲಾಖೆಯೊಂದಿಗೆ ಸಂಪರ್ಕಿಸಿ ಪೂರ್ಣಗೊಳಿಸಲು ತೀರ್ಮಾನಿಸಲಾಯಿತು. ಮುಂದಿನ ಮಹಾಸಭೆಯನ್ನು ಸೆಪ್ಟೆಂಬರ್ ತಿಂಗಳಲ್ಲಿ ನಡೆಸಲು ನಿರ್ಧರಿಸಲಾಯಿತು.

ಒಗ್ಗಟ್ಟು, ಸ್ನೇಹ ಮತ್ತು ಸೇವೆಯ ಸಂಕಲ್ಪದೊಂದಿಗೆ ಕ್ಲಬ್ ನ್ನು ಇನ್ನಷ್ಟು ಬಲಿಷ್ಠವಾಗಿ ಬೆಳೆಸುವ ಆಶಯವನ್ನು ಸಭೆ ವ್ಯಕ್ತಪಡಿಸಿತು.

ಅಧ್ಯಕ್ಷರು: ಶ್ರೀ ಜಯರಾಮ್ ಬಂಗೇರ
ಕಾರ್ಯದರ್ಶಿ: ಶ್ರೀ ವಿಶ್ವನಾಥ ಶೆಟ್ಟಿ. ಸದಸ್ಯರಾದ ಲಕ್ಷ್ಮಣ್ ಪೂಜಾರಿ. ನಾರಾಯಣಶೆಟ್ಟಿ. ಶಿವಪ್ಪ ಬಿರ್ವಾ. ಪಾಲಕ್ಷ ಸುವರ್ಣ. ಸಂತೋಷ್ ಕುಮಾರ್. ಜೀವನ್ ಪತ್ರವೋ.
ಸಂಜೀವ ಬಿಹೆಚ್. ಮುಂತಾದವರು ಉಪಸ್ಥಿತರಿದ್ದರು.

Related posts

ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

Suddi Udaya

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya
error: Content is protected !!