August 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಐಆ‌ರ್ ಆ.17 ರವರೆಗೆ ವಿಸ್ತರಣೆ

ಬೆಳ್ತಂಗಡಿ: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅವಧಿಯನ್ನು ಪುನಃ ವಿಸ್ತರಿಸಲಾಗಿದೆ. ಅದರಂತೆ ಗಣತಿ ನಮೂನೆಗಳ ಸಲ್ಲಿಕೆಗೆ ಆ. 8ರ ಬದಲು ಆ. 17 ಕೊನೆಯ ದಿನವಾಗಿದೆ.

ಗಣತಿ ನಮೂನೆಗಳ ಭರ್ತಿ ಹಾಗೂ ವಾಪಸ್ ಸಲ್ಲಿಕೆ ಸಂದರ್ಭದಲ್ಲಿ ರಾಜ್ಯದಲ್ಲಿ ಗೈರು, ನಿಧನ, ಶಾಶ್ವತ ಸ್ಥಳಾಂತರ, ನಕಲಿ, ಇತರ (ಎಎಸ್‌ಡಿಡಿಒ) ದೊಡ್ಡ ಸಂಖ್ಯೆಯಲ್ಲಿ (1.10 ಕೋಟಿ) ಆಗಿರುವುದರಿಂದ ಅವುಗಳ ಪರಿಶೀಲನೆಗೆ ರಾಜಕೀಯ ಪಕ್ಷಗಳು ಹಾಗೂ ಮತದಾರರಿಗೆ ಅವಕಾಶ ನೀಡಲು ಅವಧಿಯನ್ನು ವಿಸ್ತರಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ.

ಚುನಾವಣ ಆಯೋಗದ ಪರಿಷ್ಕೃತ ವೇಳಾಪಟ್ಟಿ ಯಂತೆ ಕರಡು ಮತದಾರರ ಪಟ್ಟಿ ಆ. 24ರಂದು ಪ್ರಕಟವಾಗಲಿದೆ. ಆಕ್ಷೇಪಣೆ ಸಲ್ಲಿಸಲು ಆ. 24ರಿಂದ ಸೆ.23, ನೋಟಿಸ್ ಜಾರಿ, ಅವುಗಳ ಪರಿಶೀಲನೆ, ಇತ್ಯರ್ಥಕ್ಕೆ ಆ. 24ರಿಂದ ಅ. 22ರ ವರೆಗೆ ಅವಕಾಶ ಇರಲಿದೆ. ಅ. 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸುಲ್ಕೇರಿಮೊಗ್ರು : ಸಾನ್ವಿಯ 10ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ; ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ನಾರಿ ಶಕ್ತಿ ವಂದನ್‌ ಸಮ್ಮೇಳನ: ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!