ಕಲ್ಲೇರಿ: ತಣ್ಣೀರುಪಂತ ಕೃಷಿ ಪತ್ತಿನ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಆ.8 ರಂದು ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು ಅಧ್ಯಕ್ಷತೆಯಲ್ಲಿ ಸಂಘದ ರೈತ ಸಭಾಭವನದಲ್ಲಿ ನಡೆಯಿತು.
ಅಧ್ಯಕ್ಷ ಜಯಾನಂದ ಕಲ್ಲಾಪು ಮಾತನಾಡಿ ಸಂಘದ ಸದಸ್ಯರಿಗೆ 12% ಡಿವಿಡೆಂಡ್ ಘೋಷಿಸಲಾಗಿದೆ. ಸಾಲ ವಸೂಲಿ ಶೇ. 100 ಆಗಿವೆ ಅಲ್ಲದೆ ಕಳೆದ 25 ವರ್ಷಗಳಿಂದ ಸತತವಾಗಿ ಲೆಕ್ಕ ಪರಿಶೋಧನೆ ಯಲ್ಲಿ ‘ಎ’ ಗ್ರೇಡ್ ಪಡೆದಿರುವುದು ಅಲ್ಲದೆ ಸತತ 25 ವರ್ಷಗಳಿಂದ ಲಾಭದಲ್ಲಿ ನಡೆಯುತ್ತಿದೆ. ಈ ಸಾಧನೆಗೆ ಸದಸ್ಯರುಗಳ, ನಿರ್ದೇಶಕರುಗಳ ಸಹಕಾರ ಹಾಗೂ ಮಾರ್ಗದರ್ಶನ ಅಲ್ಲದೆ ನಮ್ಮ ಸಿಬ್ಬಂದಿಗಳ ಪ್ರಾಮಾಣಿಕ ಸೇವೆ ಕಾರಣ ಎಂದು ಹೇಳಿದರು.

ಸಭೆಯಲ್ಲಿ ಉಪಾಧ್ಯಕ್ಷ ಸುನೀಲ್ ಅಣಾವು, ನಿರ್ದೇಶಕರಾದ ಕೃಷ್ಣಪ್ಪ ಗೌಡ, ರೋಹಿತ್ ಶೆಟ್ಟಿ, ಸಾಮ್ರಾಟ್, , ರಜನಿನಾಥ್, ಸುರೇಶ್, ಶ್ರೀನಿವಾಸ್, ಜಯಂತಿ ಪಾಲೇದು, ಜಯವಿಕ್ರಮ್ ಕಲ್ಲಾಪು, ಹಾಗೂ ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಉಪಸ್ಥಿತರಿದ್ದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ:
ಸಂಘದ ವ್ಯಾಪ್ತಿಯ ಉರುವಾಲು, ತಣ್ಣೀರುಪಂತ, ಕರಾಯ ಗ್ರಾಮಗಳಲ್ಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉನ್ನತ ಮಟ್ಟದಲ್ಲಿ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.
ನಿರ್ದೇಶಕರಾದ ಜಗದೀಶ್ ಶೆಟ್ಟಿ ಮೈರ ಸ್ವಾಗತಿಸಿ, ಸರೋಜಿನಿ ವಂದಿಸಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುರೇಂದ್ರ ಪ್ರಸಾದ್ ಕೆ ನಿರೂಪಿಸಿದರು.













