ಬೆಳ್ತಂಗಡಿ: ರಾಷ್ಟ್ರೀಯ ತೋಟಗಾರಿಕೆ ದಿನಾಚರಣೆಯ ಪ್ರಯುಕ್ತ ತೋಟಗಾರಿಕೆ ಇಲಾಖೆಯ ಪಿತಾಮಹ ಡಾ. ಎಂ ಎಚ್ ಮರಿಗೌಡರ ಜನ್ಮ ದಿನಾಚರಣೆಯನ್ನು ಮದ್ದಡ್ಕ ತೋಟಗಾರಿಕೆ ಕ್ಷೇತ್ರ ಬೆಳ್ತಂಗಡಿಯಲ್ಲಿ ಆಚರಿಸಲಾಯಿತು.
ಸಹಾಯಕ ತೋಟಗಾರಿಕೆ ನಿರ್ದೇಶಕರು ಮಂಜುನಾಥ ಹೆಚ್ಎನ್ ಹಾಗೂ ಕಚೇರಿ ಸಿಬ್ಬಂದಿ ಮತ್ತು ಸ್ಥಳೀಯ ಸಾರ್ವಜನಿಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾಗವಹಿಸಿದವರಿಗೆ ನೆನಪಿನ ಕಾಣಿಕೆಯಾಗಿ ಗಿಡಗಳನ್ನು ಮತ್ತು ಡಾಕ್ಟರ್ ಎಂ ಎಚ್ ಮರಿಗೌಡರ ಸಿದ್ದಾಂತಗಳ ಅನುಷ್ಠಾನ ಎಂಬ ಪುಸ್ತಕವನ್ನು ವಿತರಿಸಲಾಯಿತು.













