August 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜ ಅವರಿಗೆ ಪ್ರಾಥಮಿಕ ಶಿಕ್ಷಕರ ಸಂಘದಿಂದ ಸನ್ಮಾನ

ಬೆಳ್ತಂಗಡಿ: ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ ಅತ್ಯುತ್ತಮ ಶಾಸಕರಾಗಿ ಖಾಸಗಿ ವಾಹಿನಿ ಕರ್ನಾಟಕ ಟಿವಿ ವತಿಯಿಂದ ಇತ್ತೀಚೆಗೆ ನೀಡಲಾದ “ಬೆಸ್ಟ್ ಎಂ.ಎಲ್.ಎ” ಪ್ರಶಸ್ತಿಗೆ ಭಾಜನರಾದ ಶಾಸಕ ಹರೀಶ್ ಪೂಂಜ ಅವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘ, ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಶಿಕ್ಷಣ ಕ್ಷೇತ್ರ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶಾಸಕರು ನೀಡುತ್ತಿರುವ ಕೊಡುಗೆ ಹಾಗೂ ಜನಪರ ಕಾರ್ಯಗಳನ್ನು ಗುರುತಿಸಿ ಶಿಕ್ಷಕರ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದು, ಶಾಸಕ ಹರೀಶ್ ಪೂಂಜ ಅವರಿಗೆ ಶುಭ ಹಾರೈಸಿದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ವೇಣೂರು 5 ಮೆಗಾ ವಾಲ್ಟ್ ವಿದ್ಯುತ್ ಫೀಡರನ್ನು 10 ಮೆಗಾ ವಾಲ್ಟ್ ವಿದ್ಯುತ್ ಫೀಡರ್ ಪರಿವರ್ತಿಸಲು ಮನವಿ

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

Suddi Udaya
error: Content is protected !!