26.2 C
ಪುತ್ತೂರು, ಬೆಳ್ತಂಗಡಿ
August 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಆ. 7ರಂದು ಜರಗಿತು. ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ವಿದ್ಯಾಲಯದ ಉಪನ್ಯಾಸಕ ಡಾಕ್ಟರ್ ರವೀಶ್ ಪಡುಮಲೆ ದೀಪ ಬೆಳಗಿಸಿ ಕಳಸಕ್ಕೆ ಬತ್ತವನ್ನು ತುಂಬಿ ಹಿಂಗಾರ ಅರಳಿಸಿ ಚೆನ್ನೆಮನೆ ಆಡುವುದರ ಮೂಲಕ ಆಟಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಭೆಯನ್ನುದ್ದೇಶಿಸಿ ಆಟಿಯ ವಿಶೇಷತೆಯನ್ನು ಹಿಂದಿನ ಆಟಿಗೂ ಮತ್ತು ಈಗಿನ ಆಟಿಗೂ ಇರುವ ವ್ಯತ್ಯಾಸದ ಬಗ್ಗೆ ತಿಳಿಸಿ ಅಂದು ಕಷ್ಟಕ್ಕಾಗಿ ಮಾಡುವ ತಿಂಡಿ ತಿನಿಸುಗಳು ಇಂದು ಆಡಂಬರಕ್ಕಾಗಿ ನಡೆಯುತ್ತದೆ. ಆಟಿ ತಿಂಗಳಲ್ಲಿ ಮನೆಯ ಸ್ವಚ್ಛತೆ ಬಟ್ಟೆ ಬರಗಳನ್ನು ಒಣಗಲು ಹಾಕುವಂಥದ್ದು, ಆಟಿ ತಿಂಗಳು ಆನೆಯಾಗೆ ನಡೆದರೆ ಸೋಣ ತಿಂಗಳು ಕುದುರೆಯಾಗಿ ಓಡುತ್ತದೆ
ಆಟಿ ತಿಂಗಳಿನಲ್ಲಿ ಮಾಡುವ ತಿನಿಸುಗಳು ಔಷಧೀಯ ಗುಣವುಳ್ಳದ್ದು ಎಂದರು.

ಅಕ್ಷಯ್ ಕುಮಾರ್ ಉದ್ಯಮಿಗಳು ಜಿನ ಪದ್ಮ ಉಜಿರೆ , ಇವರು ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ಆಟಿ ತಿಂಗಳ ಸೊಬಗು ಕಷ್ಟಕಾಲದಲ್ಲಿ ಮಾಡುತ್ತಿರುವ ತಿನಿಸುಗಳು ಅದರಲ್ಲಿರುವ ಔಷಧೀಯ ಗುಣ ಇತ್ಯಾದಿಗಳ ಬಗ್ಗೆ ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷ ಶಾಲಾ ಮುಖ್ಯೋಪಾಧ್ಯಾಯರಾದ ವಿದ್ಯಾಕಿರಣ್ ಆಟಿ ತಿಂಗಳ ವಿಶೇಷತೆಯ ಬಗ್ಗೆ ತಿಳಿಸಿದರು.
ಹಿರಿಯ ಶಿಕ್ಷಕರಾದ ಮೋನಪ್ಪ ಗೌಡ ಮತ್ತು ವಿಶ್ವನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮನರಂಜನ ಕಾರ್ಯಕ್ರಮವನ್ನು ನೀಡಿದರು. ಹಿಂದಿ ಭಾಷಾ ಬೋಧಕರಾದ ಮೋನಪ್ಪ ಗೌಡ ಸ್ವಾಗತಿಸಿದರು. ಇಂಗ್ಲಿಷ್ ಭಾಷಾ ಅಧ್ಯಾಪಕ ವಿಶ್ವನಾಥ್ ವಂದಿಸಿದರು. ವಿದ್ಯಾರ್ಥಿಗಳಾದ ಶ್ರುತ ಆಳ್ವ ಮತ್ತು ಪೂಜಾ ಕಾರ್ಯಕ್ರಮ ನಿರೂಪಿಸಿದರು.

Related posts

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ “ಹೊಟೇಲ್ ಸಮಡೈನ್” ಉದ್ಘಾಟನೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ: ರಕ್ಷಿತ್ ಶಿವರಾಂ

Suddi Udaya

ನಿಡ್ಲೆ: ಸತ್ಯಭಾಮೆಯಮ್ಮ ನಿಧನ

Suddi Udaya

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!