26.2 C
ಪುತ್ತೂರು, ಬೆಳ್ತಂಗಡಿ
August 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಆ. 7ರಂದು ಜರಗಿತು. ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ವಿದ್ಯಾಲಯದ ಉಪನ್ಯಾಸಕ ಡಾಕ್ಟರ್ ರವೀಶ್ ಪಡುಮಲೆ ದೀಪ ಬೆಳಗಿಸಿ ಕಳಸಕ್ಕೆ ಬತ್ತವನ್ನು ತುಂಬಿ ಹಿಂಗಾರ ಅರಳಿಸಿ ಚೆನ್ನೆಮನೆ ಆಡುವುದರ ಮೂಲಕ ಆಟಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಭೆಯನ್ನುದ್ದೇಶಿಸಿ ಆಟಿಯ ವಿಶೇಷತೆಯನ್ನು ಹಿಂದಿನ ಆಟಿಗೂ ಮತ್ತು ಈಗಿನ ಆಟಿಗೂ ಇರುವ ವ್ಯತ್ಯಾಸದ ಬಗ್ಗೆ ತಿಳಿಸಿ ಅಂದು ಕಷ್ಟಕ್ಕಾಗಿ ಮಾಡುವ ತಿಂಡಿ ತಿನಿಸುಗಳು ಇಂದು ಆಡಂಬರಕ್ಕಾಗಿ ನಡೆಯುತ್ತದೆ. ಆಟಿ ತಿಂಗಳಲ್ಲಿ ಮನೆಯ ಸ್ವಚ್ಛತೆ ಬಟ್ಟೆ ಬರಗಳನ್ನು ಒಣಗಲು ಹಾಕುವಂಥದ್ದು, ಆಟಿ ತಿಂಗಳು ಆನೆಯಾಗೆ ನಡೆದರೆ ಸೋಣ ತಿಂಗಳು ಕುದುರೆಯಾಗಿ ಓಡುತ್ತದೆ
ಆಟಿ ತಿಂಗಳಿನಲ್ಲಿ ಮಾಡುವ ತಿನಿಸುಗಳು ಔಷಧೀಯ ಗುಣವುಳ್ಳದ್ದು ಎಂದರು.

ಅಕ್ಷಯ್ ಕುಮಾರ್ ಉದ್ಯಮಿಗಳು ಜಿನ ಪದ್ಮ ಉಜಿರೆ , ಇವರು ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ಆಟಿ ತಿಂಗಳ ಸೊಬಗು ಕಷ್ಟಕಾಲದಲ್ಲಿ ಮಾಡುತ್ತಿರುವ ತಿನಿಸುಗಳು ಅದರಲ್ಲಿರುವ ಔಷಧೀಯ ಗುಣ ಇತ್ಯಾದಿಗಳ ಬಗ್ಗೆ ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷ ಶಾಲಾ ಮುಖ್ಯೋಪಾಧ್ಯಾಯರಾದ ವಿದ್ಯಾಕಿರಣ್ ಆಟಿ ತಿಂಗಳ ವಿಶೇಷತೆಯ ಬಗ್ಗೆ ತಿಳಿಸಿದರು.
ಹಿರಿಯ ಶಿಕ್ಷಕರಾದ ಮೋನಪ್ಪ ಗೌಡ ಮತ್ತು ವಿಶ್ವನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮನರಂಜನ ಕಾರ್ಯಕ್ರಮವನ್ನು ನೀಡಿದರು. ಹಿಂದಿ ಭಾಷಾ ಬೋಧಕರಾದ ಮೋನಪ್ಪ ಗೌಡ ಸ್ವಾಗತಿಸಿದರು. ಇಂಗ್ಲಿಷ್ ಭಾಷಾ ಅಧ್ಯಾಪಕ ವಿಶ್ವನಾಥ್ ವಂದಿಸಿದರು. ವಿದ್ಯಾರ್ಥಿಗಳಾದ ಶ್ರುತ ಆಳ್ವ ಮತ್ತು ಪೂಜಾ ಕಾರ್ಯಕ್ರಮ ನಿರೂಪಿಸಿದರು.

Related posts

ಡಿ.8: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಇಂದಬೆಟ್ಟು-ನಡ-ಉಜಿರೆ-ಬೆಳಾಲಿನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

Suddi Udaya

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya
error: Content is protected !!